ವಿನ್ ಲೈಫ್ ಟ್ರಸ್ಟ್ ವತಿಯಿಂದ ಮಧುಮೇಹ ಜನಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ಇದೇ ಮೊದಲ ಬಾರಿಗೆ ಸಕ್ಕರೆ ಕಾಯಿಲೆ ನಿವಾರಣೆ ಹಾಗೂ ನಿಯಂತ್ರಣಕ್ಕೆ ಅಲೋಪತಿ, ಆಯುರ್ವೇದ ಮತ್ತು ಯೋಗ ಸೇರಿದಂತೆ ಎಲ್ಲಾ ವೈದ್ಯಕೀಯ ಪದ್ಧತಿಗಳ ಸಮಾಧಮ ಹಾಗೂ ಮುಕ್ತ ಚರ್ಚೆಯನ್ನು ಅಕ್ಟೋಬರ್ 16 ,2022 ರ ಬೆಳಿಗ್ಗೆ 9:00 ಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಈ ಸಮಾವೇಶದಲ್ಲಿ ಸಕ್ಕರೆ ಕಾಯಿಲೆಗೆ ಸಂಬಂಧಪಟ್ಟಂತೆ ಆಧುನಿಕ ಆವಿಷ್ಕಾರಗಳು, ಬೃಹತ್ ವಸ್ತು ಪ್ರದರ್ಶನ, ಸಂವಾದ, ಪ್ರಾತ್ಯಕ್ಷಿಕೆ, ಸಂವಾದ, ರಸಪ್ರಶ್ನೆ ಮತ್ತು ಉಪನ್ಯಾಸವನ್ನು ಏರ್ಪಡಿಸಲಾಗಿದೆ.
ಈ ಸಮಾವೇಶದಲ್ಲಿ ಭಾಗವಹಿಸಿ ಸಕ್ಕರೆ ಕಾಯಿಲೆ ಕುರಿತಾಗಿ ಹೆಚ್ಚಿನ ಅರಿವಿನ ಬಗ್ಗೆ ಮಾಹಿತಿ ನೀಡಲಾಗುತ್ತದೆ.
ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.