Saturday, May 23, 2026
Saturday, May 23, 2026

ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಮಿಂಚಿದ ಕರ್ನಾಟಕ

Date:

ಗುಜರಾತ್ ನಲ್ಲಿ ಅ.12ರ ಬುಧವಾರ ಮುಕ್ತಾಯಗೊಂಡ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕಕ್ಕೆ 88 ಪದಕಗಳು ಲಭಿಸಿದೆ. 27 ಚಿನ್ನದ ಪದಕಗಳು,23 ಬೆಳ್ಳಿ ಹಾಗೂ 38 ಕಂಚಿನ ಪದಕಗಳು ಬಂದಿವೆ.

ಈ ಮುಖಾಂತರ ದೇಶದಲ್ಲಿ ಪದಕ ವಿಜೇತ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದೆ. 21 ವರ್ಷಗಳ ನಂತರ ಕರ್ನಾಟಕ ಪುರುಷರ ಹಾಕಿ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ.ಇದೇ ಪ್ರಥಮ ಬಾರಿಗೆ ಕರ್ನಾಟಕಕ್ಕೆ ಟಾಪ್ 5 ಸ್ಥಾನ ಸಿಕ್ಕಿದೆ.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಂಚಿಕೊಂಡ ಅಂಕಿಅಂಶಗಳ ಪ್ರಕಾರ, 2007 ರಲ್ಲಿ ರಾಜ್ಯವು 21 ಚಿನ್ನ ಸೇರಿದಂತೆ 71 ಪದಕಗಳನ್ನು ಗೆದ್ದುಕೊಂಡಿತ್ತು. ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಯುವ ಸಬಲೀಕರಣ ಮತ್ತು ಕ್ರೀಡಾ ನಿರ್ದೇಶನಾಲಯದ ಆಯುಕ್ತ ಎಚ್ಎನ್ ಗೋಪಾಲಕೃಷ್ಣ, ರಾಜ್ಯವು ಕ್ರೀಡಾ ಮೂಲಸೌಕರ್ಯವನ್ನು ಸುಧಾರಿಸಲು ಮತ್ತು ಕ್ರೀಡಾಪಟುಗಳಿಗೆ ನೀಡುವ ಇತರ ಸೌಲಭ್ಯಗಳಿಗೆ ಹೆಚ್ಚು ಒತ್ತು ನೀಡುತ್ತಿರುವುದರಿಂದ ಹೆಚ್ಚಿನ ಪದಕ ಗೆಲ್ಲಲು ಸಾಧ್ಯವಾಯಿತು. ರಾಜ್ಯ ಸರ್ಕಾರವು ಇತ್ತೀಚೆಗೆ ಅಮೃತ ಕ್ರೀಡಾ ಯೋಜನೆಯನ್ನು ಪ್ರಾರಂಭಿಸಿದೆ. ವಿದೇಶದಿಂದ ತರಬೇತಿ ಪಡೆಯಲು 75 ಕ್ರೀಡಾಪಟುಗಳಿಗೆ ತಲಾ 10 ಲಕ್ಷ ರೂಪಾಯಿ ನೀಡುತ್ತಿದೆ.

ಸರ್ಕಾರ ಈಗ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳನ್ನು ಪೋಷಿಸುವತ್ತ ಗಮನಹರಿಸುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ 6,700 ಕ್ಕೂ ಹೆಚ್ಚು ಆಟದ ಮೈದಾನಗಳು, ಟ್ರ್ಯಾಕ್ಗಳು, ವಾಲಿಬಾಲ್ ಮೈದಾನಗಳು ಮತ್ತು ಇತರ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 504 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಹಯೋಗದೊಂದಿಗೆ ಎಂ ಎನ್ಆರ್ ಇಜಿಎ ಯೋಜನೆಗಳ ಅಡಿಯಲ್ಲಿ ಈಗಾಗಲೇ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. ತರಬೇತುದಾರರ ನೇಮಕಾತಿ ಕುರಿತು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳಿಗೆ ತರಬೇತಿ ನೀಡಲು ಇಲಾಖೆಯು ಪ್ರಥಮ ಬಾರಿಗೆ 176 ತರಬೇತುದಾರರನ್ನು ನೇಮಿಸಿಕೊಳ್ಳುತ್ತಿದೆ.

176 ರಲ್ಲಿ, ಶೇ. 50 ಮೀಸಲಾತಿಯು ಕ್ರೀಡಾ ಕೋಟಾದ ಅಭ್ಯರ್ಥಿಗಳಿಗೆ ಮತ್ತು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿದವರಿಗೆ ಇರುತ್ತದೆ ಎಂದರು. ಇಷ್ಟು ವರ್ಷಗಳ ಕಾಲ ಶಿಕ್ಷಣ ಇಲಾಖೆಯು ಪಿಟಿ ಶಿಕ್ಷಕರಿಗೆ ತರಬೇತಿ ನೀಡಲು ಶಿಕ್ಷಣ ಇಲಾಖೆ ಮೇಲೆ ಅವಲಂಬಿತವಾಗಿತ್ತು. ಆದರೆ ಈಗ, ನಾವು ನಮ್ಮದೇ ಆದ ತಜ್ಞರನ್ನು ಹೊಂದಿದ್ದರೆ ಸಹಾಯವಾಗುತ್ತದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...