Monday, December 8, 2025
Monday, December 8, 2025

ಕಾನೂನಿಗೆ ಗೌರವ ನೀಡಿ ಬದುಕಬೇಕಿದೆ- ಪ್ರಸನ್ನ ಕರ್ಮಕರ್

Date:

ಕಾರ್ಕಳ ಕ್ರಿಯೇಟಿವ್‌ ಕಾಲೇಜಿನಲ್ಲಿ ಕಾನೂನು ಅರಿವು ಮತ್ತು ನಮಗೂ ಹಕ್ಕಿದೆ @75 ಕಾರ್ಯಕ್ರಮ
ನಮ್ಮ ದೇಶದ ಕಾನೂನು ಅತ್ಯಂತ ಪರಿಣಾಮಕಾರಿಯಾಗಿದ್ದು, ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ನ್ಯಾಯದ ಹಕ್ಕನ್ನು ನೀಡಿದೆ.

ಕಾನೂನಿನ ಅಡಿಯಲ್ಲಿ ಪ್ರತಿ ನಾಗರೀಕನೂ ಕಾನೂನಿಗೆ ತಲೆಬಾಗಿ ತನ್ನ ಸ್ವಾತಂತ್ರವನ್ನು ಅನುಭವಿಸಬೇಕು. ನಮ್ಮ ಹಕ್ಕುಗಳಿಗಾಗಿ ಹೋರಾಡಿ ನ್ಯಾಯಾಲಯದಲ್ಲಿ ನ್ಯಾಯ ಪಡೆಯುವ ವ್ಯವಸ್ಥೆಯೂ ಇದೆ. ಇದನ್ನು ದೇಶದ ನಾಗರೀಕರಾದ ನಾವೆಲ್ಲ ಅರ್ಥೈಸಿಕೊಂಡು ಕಾನೂನಿಗೆ ಗೌರವ ನೀಡಿ ಬದುಕಬೇಕಿದೆ ಎಂದು ವಕೀಲ ಶ್ರೀ. ಪ್ರಸನ್ನ ಕರ್ಮರ್ಕರ್‌ ಹೇಳಿದರು.

ಅವರು ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ನಮಗೂ ಹಕ್ಕಿದೆ @ 75 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ನಾವೆಲ್ಲ ಕಾನೂನು ಮತ್ತು ಸಂವಿಧಾನದ ಆಶಯವನ್ನು ಗೌರವಿಸೋಣ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥಾಪಕರಾದ ಅಶ್ವಥ್‌ ಎಸ್.ಎಲ್‌, ಗಣಪತಿ ಕೆ.ಎಸ್‌, ಸಾರ್ವಜನಿಕ ಸಂಪರ್ಕ ಅಧಿಕಾರಿ ಲಿಶಾನ್‌ ಗೌಡ, ಉಪನ್ಯಾಸಕರಾದ ರಾಘವೇಂದ್ರ ರಾವ್‌, ಉಮೇಶ್‌, ಅಕ್ಷತಾ ಜೈನ್‌, ಚಂದ್ರಕಾಂತ್‌ ಉಪಸ್ಥಿತರಿದ್ದರು.
ಶ್ರೀ. ಉಮೇಶ್‌ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜು.

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣ...

Shimoga News ಜೀವರಕ್ಷಣಾ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು- ಸೀಮಾ ಆನಂದ್

Shimoga News ಜೀವ ರಕ್ಷಿಸುವ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳುವುದು ಅತ್ಯಂತ...

Gurudutt Hegde ಧ್ವಜವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ & ಅವರ ಅವಲಂಬಿತರಿಗೆ ನೆರವಾಗೋಣ- ಗುರುದತ್ತ ಹೆಗಡೆ

Gurudutt Hegde ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ...

D S Arun ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಶಾಸಕ ಡಿ.ಎಸ್.ಅರುಣ್ ಆಯ್ಕೆ.

D S Arun ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಶಿವಮೊಗ್ಗ ವಲಯ...