Wednesday, October 2, 2024
Wednesday, October 2, 2024

ಕಾನೂನಿಗೆ ಗೌರವ ನೀಡಿ ಬದುಕಬೇಕಿದೆ- ಪ್ರಸನ್ನ ಕರ್ಮಕರ್

Date:

ಕಾರ್ಕಳ ಕ್ರಿಯೇಟಿವ್‌ ಕಾಲೇಜಿನಲ್ಲಿ ಕಾನೂನು ಅರಿವು ಮತ್ತು ನಮಗೂ ಹಕ್ಕಿದೆ @75 ಕಾರ್ಯಕ್ರಮ
ನಮ್ಮ ದೇಶದ ಕಾನೂನು ಅತ್ಯಂತ ಪರಿಣಾಮಕಾರಿಯಾಗಿದ್ದು, ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ನ್ಯಾಯದ ಹಕ್ಕನ್ನು ನೀಡಿದೆ.

ಕಾನೂನಿನ ಅಡಿಯಲ್ಲಿ ಪ್ರತಿ ನಾಗರೀಕನೂ ಕಾನೂನಿಗೆ ತಲೆಬಾಗಿ ತನ್ನ ಸ್ವಾತಂತ್ರವನ್ನು ಅನುಭವಿಸಬೇಕು. ನಮ್ಮ ಹಕ್ಕುಗಳಿಗಾಗಿ ಹೋರಾಡಿ ನ್ಯಾಯಾಲಯದಲ್ಲಿ ನ್ಯಾಯ ಪಡೆಯುವ ವ್ಯವಸ್ಥೆಯೂ ಇದೆ. ಇದನ್ನು ದೇಶದ ನಾಗರೀಕರಾದ ನಾವೆಲ್ಲ ಅರ್ಥೈಸಿಕೊಂಡು ಕಾನೂನಿಗೆ ಗೌರವ ನೀಡಿ ಬದುಕಬೇಕಿದೆ ಎಂದು ವಕೀಲ ಶ್ರೀ. ಪ್ರಸನ್ನ ಕರ್ಮರ್ಕರ್‌ ಹೇಳಿದರು.

ಅವರು ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ನಮಗೂ ಹಕ್ಕಿದೆ @ 75 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ನಾವೆಲ್ಲ ಕಾನೂನು ಮತ್ತು ಸಂವಿಧಾನದ ಆಶಯವನ್ನು ಗೌರವಿಸೋಣ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥಾಪಕರಾದ ಅಶ್ವಥ್‌ ಎಸ್.ಎಲ್‌, ಗಣಪತಿ ಕೆ.ಎಸ್‌, ಸಾರ್ವಜನಿಕ ಸಂಪರ್ಕ ಅಧಿಕಾರಿ ಲಿಶಾನ್‌ ಗೌಡ, ಉಪನ್ಯಾಸಕರಾದ ರಾಘವೇಂದ್ರ ರಾವ್‌, ಉಮೇಶ್‌, ಅಕ್ಷತಾ ಜೈನ್‌, ಚಂದ್ರಕಾಂತ್‌ ಉಪಸ್ಥಿತರಿದ್ದರು.
ಶ್ರೀ. ಉಮೇಶ್‌ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...