Thursday, March 26, 2026
Thursday, March 26, 2026

ಮಾತೃಭಾಷೆ ಮಾಧ್ಯಮದಿಂದ ಸೃಜನಶಕ್ತಿ ಮತ್ತು ವಿಶ್ಲೇಷಣಾ ಶಕ್ತಿ ವೃದ್ಧಿ – ದ್ರೌಪದಿ ಮುರ್ಮು

Date:

ಪ್ರಾದೇಶಿಕ ಹಾಗೂ ಸ್ಥಳೀಯ ಭಾಷೆಯಲ್ಲಿ ಅಧ್ಯಯನ ಮಾಡುವುದರಿಂದ ಎಲ್ಲರಿಗೂ ಶಿಕ್ಷಣ ದೊರೆಯುತ್ತದೆ ಎಂದು ರಾಷ್ಟ್ರಪತಿ ದ್ರೌಪತಿ ಮುರ್ಮು ಹೇಳಿದ್ದಾರೆ.

ಎರಡು ದಿನಗಳ ಒಡಿಶಾ ಪ್ರವಾಸದಲ್ಲಿರುವ ಮುರ್ಮು ಅವರು ಕೇಂದ್ರ ಶಿಕ್ಷಣ ಸಚಿವಾಲಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿ, ಶಿಕ್ಷಣವು ಸಬಲೀಕರಣದ ಸಾಧನವಾಗಿದೆ ಮತ್ತು ಮಾತೃಭಾಷೆಯ ಬಳಕೆಯು ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ ಎಂದರು.

ಮಾತೃಭಾಷೆಯಲ್ಲಿ ಕಲಿಯುವುದರಿಂದ ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕ ಚಿಂತನೆ ಮತ್ತು ವಿಶ್ಲೇಷಣಾತ್ಮಕ ಕೌಶಲ ವೃದ್ಧಿಯಾಗುತ್ತದೆ.

ಅಲ್ಲದೇ ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಸಮಾನ ಅವಕಾಶ ಸಿಗುತ್ತದೆ. ದೇಶದ ಪ್ರತಿ ಮಗುವಿಗೂ ತಾರತಮ್ಯವಿಲ್ಲದೇ ಶಿಕ್ಷಣ ದೊರೆಯುವಂತಾಗಬೇಕು. ಈ ಕಾರಣದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅಡಿಯಲ್ಲಿ ಪ್ರಾದೇಶಿಕ ಭಾಷೆಯಲ್ಲಿ ತಾಂತ್ರಿಕ ಶಿಕ್ಷಣ ನೀಡಲು ಸರ್ಕಾರ ಮುಂದಾಗಿದೆ ಎಂದರು.

ಸ್ಥಳೀಯ ಭಾಷೆಗಳಲ್ಲಿ ತಾಂತ್ರಿಕ ಪುಸ್ತಕ ದೊರೆಯುವಂತೆ ಮಾಡಿದ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಷನ್‌ (ಎಐಸಿಇಟಿ) ಕಾರ್ಯವನ್ನು ಶ್ಲಾಘಿಸಿದರು.

ಕಾರ್ಯಕ್ರಮಕ್ಕೂ ಮುನ್ನ ತಾವು ಓದಿದ ಅಲ್ಮಾ ಮ್ಯಾಟರ್‌ ಗವರ್ನಮೆಂಟ್ ಗರ್ಲ್ಸ್‌ ಹೈಸ್ಕೂಲ್‌, ತಾವು ವಾಸವಿದ್ದ ಕುಂತಲಾ ಕುಮಾರಿ ಸಾಬತ್‌ ಆದಿವಾಸಿ ಗರ್ಲ್ಸ್‌ ವಸತಿ ಗೃಹಕ್ಕೆ ಭೇಟಿ ನೀಡಿ ತಮ್ಮ ಹಿಂದಿನ ದಿನಗಳನ್ನು ಸ್ಮರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Water Tax ಶಿವಮೊಗ್ಗದ ವಿವಿಧೆಡೆ ನೀರಿನ ಕಂದಾಯ ಪಾವತಿ ಕೌಂಟರ್ ವ್ಯವಸ್ಥೆ.

Water Tax ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ...

Adichunchanagiri Mutt ಏಪ್ರಿಲ್1. ಸರಳ ಸಾಮೂಹಿಕ ವಿವಾಹ & ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ

Adichunchanagiri Mutt ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ...