Friday, March 20, 2026
Friday, March 20, 2026

500 ಜನೌಷಧ ಮಳಿಗೆ ತೆರೆಯಲು ಸರ್ಕಾರದ ಪ್ರಸ್ತಾವನೆ-ಡಾ.ಸುಧಾಕರ್

Date:

ಬಡ, ಹಿಂದುಳಿದ ಮತ್ತು ಮಧ್ಯಮ ವರ್ಗದವರಿಗೆ ರಿಯಾಯಿತಿ ದರದಲ್ಲಿ ಔಷಧ ಹಾಗೂ ಶಸ್ತ್ರ ಚಿಕಿತ್ಸಾ ಪರಿಕರಗಳು ಲಭ್ಯವಾಗುವ ಜನೌಷಧ ಮಳಿಗೆಗಳು ಇನ್ನಷ್ಟು ತೆರೆಯಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ಕೇಳಿ ಬರುತ್ತಿತ್ತು.

ಇದೀಗ ಸರ್ಕಾರ ಇದಕ್ಕೆ ಸೂಕ್ತವಾಗಿ ಸ್ಪಂದಿಸಿದೆ. ರಾಜ್ಯದಲ್ಲಿ ಹೊಸದಾಗಿ 500 ಜನೌಷಧ ಮಳಿಗೆಗಳನ್ನು ತೆರೆಯಲು ಚಿಂತನೆ ನಡೆಸಿದೆ.

ಅಲ್ಲದೆ ಸರ್ಕಾರಿ ಆಸ್ಪತ್ರೆಗಳಲ್ಲಿ 40 ಮಳಿಗೆ ತೆರೆಯಲು ಅನುಮತಿ ನೀಡುವಂತೆ ಕೋರಿ ಭಾರತೀಯ ಔಷಧ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದೆ. ಜನೌಷಧ ಮಳಿಗೆ ಸ್ಥಾಪನೆ ವಿಚಾರದಲ್ಲಿ ಉತ್ತರ ಪ್ರದೇಶ ನಂತರದ ಸ್ಥಾನದಲ್ಲಿ ಕರ್ನಾಟಕವಿದೆ. ಈ ವರ್ಷದ ಫೆಬ್ರವರಿ ನಂತರ 300 ಮಳಿಗೆಗಳನ್ನು ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಜನೌಷಧ ಮಳಿಗೆಗಳಲ್ಲಿ ಮಾರುಕಟ್ಟೆ ದರಕ್ಕಿಂತ ಶೇಕಡ 50 ರಿಂದ ಶೇಕಡ 80ರಷ್ಟು ಅಗ್ಗದ ದರದಲ್ಲಿ ದೊರೆಯುತ್ತಿದೆ. ಒಟ್ಟು 1,451 ಔಷಧಿಗಳು ಹಾಗೂ 240 ಶಸ್ತ್ರ ಚಿಕಿತ್ಸಾ ಪರಿಕರಗಳು ಜೊತೆಗೆ ದುಬಾರಿ ವೆಚ್ಚದ ಕ್ಯಾನ್ಸರ್ ಔಷಧಿಗಳು ಸಹ ಇಲ್ಲಿ ದೊರೆಯುತ್ತಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...