Thursday, August 13, 2026
Thursday, August 13, 2026

500 ಜನೌಷಧ ಮಳಿಗೆ ತೆರೆಯಲು ಸರ್ಕಾರದ ಪ್ರಸ್ತಾವನೆ-ಡಾ.ಸುಧಾಕರ್

Date:

ಬಡ, ಹಿಂದುಳಿದ ಮತ್ತು ಮಧ್ಯಮ ವರ್ಗದವರಿಗೆ ರಿಯಾಯಿತಿ ದರದಲ್ಲಿ ಔಷಧ ಹಾಗೂ ಶಸ್ತ್ರ ಚಿಕಿತ್ಸಾ ಪರಿಕರಗಳು ಲಭ್ಯವಾಗುವ ಜನೌಷಧ ಮಳಿಗೆಗಳು ಇನ್ನಷ್ಟು ತೆರೆಯಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ಕೇಳಿ ಬರುತ್ತಿತ್ತು.

ಇದೀಗ ಸರ್ಕಾರ ಇದಕ್ಕೆ ಸೂಕ್ತವಾಗಿ ಸ್ಪಂದಿಸಿದೆ. ರಾಜ್ಯದಲ್ಲಿ ಹೊಸದಾಗಿ 500 ಜನೌಷಧ ಮಳಿಗೆಗಳನ್ನು ತೆರೆಯಲು ಚಿಂತನೆ ನಡೆಸಿದೆ.

ಅಲ್ಲದೆ ಸರ್ಕಾರಿ ಆಸ್ಪತ್ರೆಗಳಲ್ಲಿ 40 ಮಳಿಗೆ ತೆರೆಯಲು ಅನುಮತಿ ನೀಡುವಂತೆ ಕೋರಿ ಭಾರತೀಯ ಔಷಧ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದೆ. ಜನೌಷಧ ಮಳಿಗೆ ಸ್ಥಾಪನೆ ವಿಚಾರದಲ್ಲಿ ಉತ್ತರ ಪ್ರದೇಶ ನಂತರದ ಸ್ಥಾನದಲ್ಲಿ ಕರ್ನಾಟಕವಿದೆ. ಈ ವರ್ಷದ ಫೆಬ್ರವರಿ ನಂತರ 300 ಮಳಿಗೆಗಳನ್ನು ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಜನೌಷಧ ಮಳಿಗೆಗಳಲ್ಲಿ ಮಾರುಕಟ್ಟೆ ದರಕ್ಕಿಂತ ಶೇಕಡ 50 ರಿಂದ ಶೇಕಡ 80ರಷ್ಟು ಅಗ್ಗದ ದರದಲ್ಲಿ ದೊರೆಯುತ್ತಿದೆ. ಒಟ್ಟು 1,451 ಔಷಧಿಗಳು ಹಾಗೂ 240 ಶಸ್ತ್ರ ಚಿಕಿತ್ಸಾ ಪರಿಕರಗಳು ಜೊತೆಗೆ ದುಬಾರಿ ವೆಚ್ಚದ ಕ್ಯಾನ್ಸರ್ ಔಷಧಿಗಳು ಸಹ ಇಲ್ಲಿ ದೊರೆಯುತ್ತಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...