Thursday, March 26, 2026
Thursday, March 26, 2026

ರಾಜ್ಯದಲ್ಲಿ 18 ಲಕ್ಷ ಮನೆಗಳ ನಿರ್ಮಾಣ- ಬೊಮ್ಮಾಯಿ

Date:

ಕರ್ನಾಟಕ ರಾಜ್ಯದಲ್ಲಿ ಎಲ್ಲರಿಗೂ ವಸತಿ ಕಲ್ಪಿಸಲು ಬಹಳ ದೊಡ್ಡ ಪ್ರಮಾಣದಲ್ಲಿ ನಾವು ಕ್ರಮ ತೆಗೆದುಕೊಂಡಿದ್ದೇವೆ. 18 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದ್ದು, ಐದು ಲಕ್ಷ‌ ಮನೆ ಮಂಜೂರು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಭಾನುವಾರ ವಸತಿ ಇಲಾಖೆಯ ಕರ್ನಾಟಕ ಗೃಹ ಮಂಡಳಿ ವತಿಯಿಂದ ಕೆಂಗೇರಿ ವಲಗೇರಹಳ್ಳಿಯಲ್ಲಿ ಬೃಹತ್ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಈ ಹಿಂದಿನ ಕಾಂಗ್ರೆಸ್ ಸರ್ಕಾರ 2018 ರಲ್ಲಿ ಸರ್ಕಾರದ ಕೊನೆಯ ಅವಧಿಯಲ್ಲಿ 15 ಲಕ್ಷ ಮನೆಗಳನ್ನು ಘೋಷಣೆ ಮಾಡಿತ್ತು.‌ 15 ಲಕ್ಷ ಮನೆ ಘೋಷಿಸಿ, 2,500 ಕೋಟಿ ರೂ. ನೀಡಿತ್ತು. ಅದರಲ್ಲಿ 1,000 ಕೋಟಿ ಖರ್ಚು ಮಾಡಿದ್ದೇನೆಂದು ಘೋಷಣೆ ಮಾಡಿತ್ತು. ಅಲ್ಲದೆ ಪ್ರಧಾನಮಂತ್ರಿ ಯೋಜನೆಯನ್ನೂ ಜನರಿಂದ ದೂರ ಇಟ್ಟಿತ್ತು. ಸ್ವಪ್ರತಿಷ್ಠೆಗಾಗಿ ಒಂದು ಸರ್ಕಾರ ಜನರ ಹಿತ ಕಾಯದೇ ಅನ್ಯಾಯ ಮಾಡಿತ್ತು ಎಂದು ಕಾಂಗ್ರೆಸ್‌ ವಿರುದ್ಧ ಬಸವರಾಜ ಬೊಮ್ಮಾಯಿ‌ ವಾಗ್ದಾಳಿ ನಡೆಸಿದರು.

ಭಾನುವಾರ ವಸತಿ ಇಲಾಖೆಯ ಕರ್ನಾಟಕ ಗೃಹ ಮಂಡಳಿ ವತಿಯಿಂದ ಕೆಂಗೇರಿ ವಲಗೇರಹಳ್ಳಿಯಲ್ಲಿ ಬೃಹತ್ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಈ ಹಿಂದಿನ ಕಾಂಗ್ರೆಸ್ ಸರ್ಕಾರ 2018 ರಲ್ಲಿ ಸರ್ಕಾರದ ಕೊನೆಯ ಅವಧಿಯಲ್ಲಿ 15 ಲಕ್ಷ ಮನೆಗಳನ್ನು ಘೋಷಣೆ ಮಾಡಿತ್ತು.‌ 15 ಲಕ್ಷ ಮನೆ ಘೋಷಿಸಿ, 2,500 ಕೋಟಿ ರೂ. ನೀಡಿತ್ತು. ಅದರಲ್ಲಿ 1,000 ಕೋಟಿ ಖರ್ಚು ಮಾಡಿದ್ದೇನೆಂದು ಘೋಷಣೆ ಮಾಡಿತ್ತು. ಅಲ್ಲದೆ ಪ್ರಧಾನಮಂತ್ರಿ ಯೋಜನೆಯನ್ನೂ ಜನರಿಂದ ದೂರ ಇಟ್ಟಿತ್ತು. ಸ್ವಪ್ರತಿಷ್ಠೆಗಾಗಿ ಒಂದು ಸರ್ಕಾರ ಜನರ ಹಿತ ಕಾಯದೇ ಅನ್ಯಾಯ ಮಾಡಿತ್ತು ಎಂದು ಕಾಂಗ್ರೆಸ್‌ ವಿರುದ್ಧ ಬಸವರಾಜ ಬೊಮ್ಮಾಯಿ‌ ಅವರು ವಾಗ್ದಾಳಿ ನಡೆಸಿದರು.

ನಮ್ಮ ಸರ್ಕಾರ ಬಂದ ಮೇಲೆ 18 ಲಕ್ಷ ಮನೆ ನಿರ್ಮಾಣ ಕಾರ್ಯ ನಡೆಸಿದೆ. ಒಟ್ಟು 5 ಲಕ್ಷ ಮನೆಗಳನ್ನು ನಾನು ನೀಡಿದ್ದೇನೆ.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ (ಸ್ಲಂ ಬೋರ್ಡ್) ನಿಂದ 80 ಸಾವಿರ ಮನೆ ಮಂಜೂರು ಮಾಡಲಾಗಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ 1 ಲಕ್ಷ ಮನೆ‌ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದ್ದು ಈಗಾಗಲೇ 40 ಸಾವಿರ ಮನೆಗಳ ಹಂಚಿಕೆ ಮಾಡಿ ಚಾಲನೆ ನೀಡಲಾಗಿದೆ. ಇದು ಕ್ರಿಯಾಶೀಲ ವಸತಿ ಸಚಿವ ವಿ.ಸೋಮಣ್ಣ ಅವರಿಂದ ಸಾಧ್ಯವಾಗಿದೆ ಎಂದರು.

ದೇಶದಲ್ಲಿ ಅತೀ ಹೆಚ್ಚು ವೇಗವಾಗಿ ಬೆಳೆಯುತ್ತಿರುವ ನಗರ ಬೆಂಗಳೂರು. ಹೊಟ್ಟೆಪಾಡಿಗಾಗಿ ದುಡಿಯಲು, ವೃತ್ತಿ ಅರಸಿ, ಇಲ್ಲಿ ಸುವ್ಯವಸ್ಥೆ, ವಾತಾವರಣ ಹೀಗೆ ಒಂದಲ್ಲ ಒಂದು ಕಾರಣಗಳಿಗೆ ಅತೀ ಹೆಚ್ಚು ಜನರು ರಾಜ್ಯದ ರಾಜಧಾನಿ ಬೆಂಗಳೂರು ನಗರಕ್ಕೆ ಅಗಮಿಸುತ್ತಿದ್ದಾರೆ. ಹೀಗಾಗಿ ನಗರದ ಜನಸಂಖ್ಯೆ ದಿನೇ ದಿನೆ ಬೆಳೆಯುತ್ತಿದೆ. ಇಲ್ಲಿ ಪ್ರತಿ ದಿನ 5,000 ವಾಹನಗಳ ನೋಂದಣಿ ಆಗುತ್ತಿದೆ. ಹೀಗೆ ಮುಂದುವರೆದರೆ ಮುಂದಿನ ಕೆಲವೇ ದಿನಗಳಲ್ಲಿ ಜನಸಂಖ್ಯೆಗಿಂತ ವಾಹನಗಳ ಸಂಖ್ಯೆಯೇ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಬೆಂಗಳೂರರನ್ನು ಡಿ ಕಂಜೆಸ್ಡೆಡ್ ಮಾಡುವ ಅಗತ್ಯವಿದೆ ಎಂದು ಬೊಮ್ಮಾಯಿ ಅಭಿಪ್ರಾಯಪಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Water Tax ಶಿವಮೊಗ್ಗದ ವಿವಿಧೆಡೆ ನೀರಿನ ಕಂದಾಯ ಪಾವತಿ ಕೌಂಟರ್ ವ್ಯವಸ್ಥೆ.

Water Tax ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ...

Adichunchanagiri Mutt ಏಪ್ರಿಲ್1. ಸರಳ ಸಾಮೂಹಿಕ ವಿವಾಹ & ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ

Adichunchanagiri Mutt ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ...