Friday, March 14, 2025
Friday, March 14, 2025

ಸೊರಬ,ಯಲವಳ್ಳಿ ಹೋರಿ ಬೆದರಿಸುವ ಹಬ್ಬ

Date:

ಸೊರಬ: ಗ್ರಾಮೀಣ ಭಾಗದ ರೈತರ ಹಬ್ಬವಾಗಿರುವ ಜನಪದ ಕ್ರೀಡೆ ಸಾಂಪ್ರದಾಯಿಕ ಹೋರಿ ಬೆದರಿಸುವ ಹಬ್ಬ ಸೊರಬ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ವಿಜೃಂಭಣೆಯಿಂದ ರೋಚಕವಾಗಿ ಜರುಗಿತು. ಹೋರಿ ಪ್ರಿಯರಲ್ಲಿ ಉತ್ಸಾಹ ಎಲ್ಲೆಮೀರಿತ್ತು.

ದೀಪಾವಳಿಯ ನಂತರದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹೋರಿ ಬೆದರಿಸುವ ಹಬ್ಬ ಮಹತ್ವವನ್ನು ಪಡೆದಿದ್ದು, ಅಖಾಡದಲ್ಲಿ ಹೋರಿಗಳು ಓಡಿ ಹೋಗುವುದನ್ನು ನೋಡಲು ತಾಲೂಕಿನ ವಿವಿಧ ಗ್ರಾಮಗಳು ಸೇರಿದಂತೆ ನೆರೆಯ ತಾಲೂಕು, ಜಿಲ್ಲೆಗಳಿಂದ ಭಾರಿ ಸಂಖ್ಯೆಯಲ್ಲಿ ಹೋರಿ ಪ್ರಿಯರು ಘೇರಾಯಿಸಿದ್ದರು.

ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದಂತೆ ಹೋರಿಗಳು ಓಡಿ ಹೋಗುವ ದೃಶ್ಯ ನೋಡುಗರ ಮೈನವಿರೇಳಿಸಿತು. ಹೋರಿ ಹಿಡಿಯುವ ದೃಶ್ಯವು ನೋಡುಗರ ಉಸಿರು ಬಿಗಿ ಹಿಡಿವಂತೆ ಮಾಡಿತು. ಗ್ರಾಮೀಣ ಯುವಜನರ ಸಾಹಸ, ಕೆಚ್ಚು ಇತ್ಯಾದಿಗಳನ್ನು ಬಿಂಬಿಸುವಂತೆ ಮಾಡುವ ಇಂತಹ ಹೋರಿ ಹಬ್ಬಗಳು ನಮ್ಮ ಹಳ್ಳಿಗಳ ಶೌರ್ಯದ ಸಂಕೇತವಾಗಿದೆ.

ಹೋರಿಗಳ ಮಾಲೀಕರು ಹೋರಿಗಳಿಗೆ ವಿವಿಧ ಬಗೆಯ ಜೂಲಗಳನ್ನು ಹೊದಿಸಿ, ಬಣ್ಣ ಬಣ್ಣದ ಬಲೂನುಗಳು ಹಾಗೂ ಕೊಬ್ಬರಿ ಕಟ್ಟಿ ಶೃಂಗರಿಸಿದ್ದರು.

 ಅಖಾಡದಲ್ಲಿ ಪುನೀತ್ ರಾಜ್‍ಕುಮಾರ್ ಸವಿನೆನಪಿಗಾಗಿ ಆನವಟ್ಟಿಯ ಪವರ್‍ಸ್ಟಾರ್, ಹಿರೇಕಸವಿ ಹಂತಕ, ತಡಸನಹಳ್ಳಿ ಡಾನ್, ಬಿಳಕಿ ಕೆಪಿಆರ್ ಕಿಂಗ್, ಮಾವಲಿ ಗೌಡ್ರು ಮಗ, ಬೈರೇಕೊಪ್ಪದ ಮದಗಜ, ಕೊಡಕಣಿ ಕದಂಬ, ಶಿರಾಳಕೊಪ್ಪದ ವೀರಕೇಸರಿ, ಸೊರಬದ ಶ್ರೀರಾಮ, ಚಿಕ್ಕಸವಿ ಜನಮೆಚ್ಚಿದ ಮಗ, ಕೊಡಕಣಿ ಬಸವ, ಯಲವಳ್ಳಿ ಗ್ರಾಮದ ಹೋರಿಗಳಾದ ಪಾಳೇಗಾರ, ಜಮೀನ್ದಾರ, ಗರುಡ, ಅಭಿಮನ್ಯು, ಕಂಸ ಹೋರಿ ಸವಿನೆನಪಿಗಾಗಿ ಕಲ್ಲೇಶ, ಸೇರಿದಂತೆ ವಿವಿಧ ಹೆಸರುಗಳ ಹೋರಿಗಳು ಅಖಾಡದಲ್ಲಿ ಓಡಿದವು. ಯುವಕರು ಹೋರಿಗಳನ್ನು ಹಿಡಿದು ಬಲ ಪ್ರದರ್ಶಿಸಿದರೆ, ಜನತೆ ಅದನ್ನು ನೋಡಿ ರೋಮಾಂಚನಗೊಂಡಿತು.

ಗ್ರಾಮ ಸಮಿತಿಯವರು ಅಖಾಡದಲ್ಲಿ ಎರಡು ಬದಿಯಲ್ಲಿ ಸುರಕ್ಷತಾ ಕ್ರಮ ಕೈಗೊಂಡಿದ್ದರು. ಅಖಾಡದಲ್ಲಿ ಕ್ರಮವಾಗಿ ಒಂದೊಂದೆ ಹೋರಿಗಳನ್ನು ಓಡಿಸಿದರು. ಇದರಿಂದ ಯಾವುದೇ ಅಪಾಯಗಳು ಸಂಭವಿಸಲಿಲ್ಲ. ಸಮಿತಿಯವರು ಉತ್ತಮ ರೀತಿಯಲ್ಲಿ ಸುರಕ್ಷತೆಗೆ ಗಮನ ನೀಡಿದ್ದರು. ಇದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು. ಅಖಾಡದಲ್ಲಿ ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲ ಪ್ರದರ್ಶನ ತೋರಿದ ಯುವಕರನ್ನು ಗುರುತಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ‌ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ

Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್...

State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ

State Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ...

Klive Special ಹೆತ್ತವಳಿಗೊಂದು ಕವನ-ನಮನ

Klive Special ದೇವರ ಸ್ವರೂಪ ಗರ್ಭದಲ್ಲಿ ಹೊತ್ತುನವಮಾಸಕ್ಕೆ ಹೆತ್ತುಮೌಲ್ಯಗಳನ್ನೇ ಬಿತ್ತುಸಲಹಿದೆ ನೀಡಿ ಕೈತುತ್ತು ಅಮ್ಮ...

Guarantee Scheme ಸತ್ಯ & ಶುದ್ಧ ಮಾರ್ಗದಿಂದ ರಾಷ್ಟ್ರ ಕಟ್ಟಲು ಸಾಧ್ಯ- ಸಿ.ಎಸ್.ಚಂದ್ರಭೂಪಾಲ್

Guarantee Scheme ಅಂತರಂಗ ಮತ್ತು ಬಹಿರಂಗ ಶುದ್ದಿಯಿಂದ ಹಾಗೂ ಸತ್ಯದ ಮಾರ್ಗದಲ್ಲಿ...