Sunday, August 23, 2026
Sunday, August 23, 2026

ಸೊರಬ,ಯಲವಳ್ಳಿ ಹೋರಿ ಬೆದರಿಸುವ ಹಬ್ಬ

Date:

ಸೊರಬ: ಗ್ರಾಮೀಣ ಭಾಗದ ರೈತರ ಹಬ್ಬವಾಗಿರುವ ಜನಪದ ಕ್ರೀಡೆ ಸಾಂಪ್ರದಾಯಿಕ ಹೋರಿ ಬೆದರಿಸುವ ಹಬ್ಬ ಸೊರಬ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ವಿಜೃಂಭಣೆಯಿಂದ ರೋಚಕವಾಗಿ ಜರುಗಿತು. ಹೋರಿ ಪ್ರಿಯರಲ್ಲಿ ಉತ್ಸಾಹ ಎಲ್ಲೆಮೀರಿತ್ತು.

ದೀಪಾವಳಿಯ ನಂತರದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹೋರಿ ಬೆದರಿಸುವ ಹಬ್ಬ ಮಹತ್ವವನ್ನು ಪಡೆದಿದ್ದು, ಅಖಾಡದಲ್ಲಿ ಹೋರಿಗಳು ಓಡಿ ಹೋಗುವುದನ್ನು ನೋಡಲು ತಾಲೂಕಿನ ವಿವಿಧ ಗ್ರಾಮಗಳು ಸೇರಿದಂತೆ ನೆರೆಯ ತಾಲೂಕು, ಜಿಲ್ಲೆಗಳಿಂದ ಭಾರಿ ಸಂಖ್ಯೆಯಲ್ಲಿ ಹೋರಿ ಪ್ರಿಯರು ಘೇರಾಯಿಸಿದ್ದರು.

ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದಂತೆ ಹೋರಿಗಳು ಓಡಿ ಹೋಗುವ ದೃಶ್ಯ ನೋಡುಗರ ಮೈನವಿರೇಳಿಸಿತು. ಹೋರಿ ಹಿಡಿಯುವ ದೃಶ್ಯವು ನೋಡುಗರ ಉಸಿರು ಬಿಗಿ ಹಿಡಿವಂತೆ ಮಾಡಿತು. ಗ್ರಾಮೀಣ ಯುವಜನರ ಸಾಹಸ, ಕೆಚ್ಚು ಇತ್ಯಾದಿಗಳನ್ನು ಬಿಂಬಿಸುವಂತೆ ಮಾಡುವ ಇಂತಹ ಹೋರಿ ಹಬ್ಬಗಳು ನಮ್ಮ ಹಳ್ಳಿಗಳ ಶೌರ್ಯದ ಸಂಕೇತವಾಗಿದೆ.

ಹೋರಿಗಳ ಮಾಲೀಕರು ಹೋರಿಗಳಿಗೆ ವಿವಿಧ ಬಗೆಯ ಜೂಲಗಳನ್ನು ಹೊದಿಸಿ, ಬಣ್ಣ ಬಣ್ಣದ ಬಲೂನುಗಳು ಹಾಗೂ ಕೊಬ್ಬರಿ ಕಟ್ಟಿ ಶೃಂಗರಿಸಿದ್ದರು.

 ಅಖಾಡದಲ್ಲಿ ಪುನೀತ್ ರಾಜ್‍ಕುಮಾರ್ ಸವಿನೆನಪಿಗಾಗಿ ಆನವಟ್ಟಿಯ ಪವರ್‍ಸ್ಟಾರ್, ಹಿರೇಕಸವಿ ಹಂತಕ, ತಡಸನಹಳ್ಳಿ ಡಾನ್, ಬಿಳಕಿ ಕೆಪಿಆರ್ ಕಿಂಗ್, ಮಾವಲಿ ಗೌಡ್ರು ಮಗ, ಬೈರೇಕೊಪ್ಪದ ಮದಗಜ, ಕೊಡಕಣಿ ಕದಂಬ, ಶಿರಾಳಕೊಪ್ಪದ ವೀರಕೇಸರಿ, ಸೊರಬದ ಶ್ರೀರಾಮ, ಚಿಕ್ಕಸವಿ ಜನಮೆಚ್ಚಿದ ಮಗ, ಕೊಡಕಣಿ ಬಸವ, ಯಲವಳ್ಳಿ ಗ್ರಾಮದ ಹೋರಿಗಳಾದ ಪಾಳೇಗಾರ, ಜಮೀನ್ದಾರ, ಗರುಡ, ಅಭಿಮನ್ಯು, ಕಂಸ ಹೋರಿ ಸವಿನೆನಪಿಗಾಗಿ ಕಲ್ಲೇಶ, ಸೇರಿದಂತೆ ವಿವಿಧ ಹೆಸರುಗಳ ಹೋರಿಗಳು ಅಖಾಡದಲ್ಲಿ ಓಡಿದವು. ಯುವಕರು ಹೋರಿಗಳನ್ನು ಹಿಡಿದು ಬಲ ಪ್ರದರ್ಶಿಸಿದರೆ, ಜನತೆ ಅದನ್ನು ನೋಡಿ ರೋಮಾಂಚನಗೊಂಡಿತು.

ಗ್ರಾಮ ಸಮಿತಿಯವರು ಅಖಾಡದಲ್ಲಿ ಎರಡು ಬದಿಯಲ್ಲಿ ಸುರಕ್ಷತಾ ಕ್ರಮ ಕೈಗೊಂಡಿದ್ದರು. ಅಖಾಡದಲ್ಲಿ ಕ್ರಮವಾಗಿ ಒಂದೊಂದೆ ಹೋರಿಗಳನ್ನು ಓಡಿಸಿದರು. ಇದರಿಂದ ಯಾವುದೇ ಅಪಾಯಗಳು ಸಂಭವಿಸಲಿಲ್ಲ. ಸಮಿತಿಯವರು ಉತ್ತಮ ರೀತಿಯಲ್ಲಿ ಸುರಕ್ಷತೆಗೆ ಗಮನ ನೀಡಿದ್ದರು. ಇದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು. ಅಖಾಡದಲ್ಲಿ ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲ ಪ್ರದರ್ಶನ ತೋರಿದ ಯುವಕರನ್ನು ಗುರುತಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...