Friday, March 27, 2026
Friday, March 27, 2026

ವಿಜ್ಞಾನ ಹಾಗು ತಂತ್ರಜ್ಞಾನ ಐಟಿ ಕ್ಷೇತ್ರದ ಸಾಧನೆ ಮಹತ್ವದ್ದು- ಬೊಮ್ಮಾಯಿ

Date:

ಬೆಂಗಳೂರು ಕೇವಲ ಭಾರತದ ಸಿಲಿಕಾನ್ ವ್ಯಾಲಿ ಅಲ್ಲ, ವಿಶ್ವದ ಸಿಲಿಕಾನ್ ವ್ಯಾಲಿಯಾಗಿ ಬೆಳೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರು ಟೆಕ್ ಸಮ್ಮಿಟ್ ಬೆಳ್ಳಿಹಬ್ಬದ ಅಂಗವಾಗಿ ಕರ್ನಾಟಕ ರಾಜ್ಯದ ಐಟಿ, ಬಿಟಿ ವಲಯಕ್ಕೆ ಮಹತ್ತರ ಕೊಡುಗೆ ನೀಡಿದ ವಿವಿಧ ಕಂಪೆನಿಗಳ ಮುಖ್ಯಸ್ಥರನ್ನು ಅವರು ಸನ್ಮಾನಿಸಿ ಮಾತನಾಡಿದರು.

ಬೆಳ್ಳಿ ಹಬ್ಬ ಆಚರಣೆ ಬಹುತೇಕ ಸಿನೆಮಾ ಓಡಿದಾಗ ಆಚರಿಸುತ್ತಾರೆ. ವಿಜ್ಞಾನ ಹಾಗೂ ತಂತ್ರಜ್ಞಾನ ಐಟಿ ಇಪ್ಪತ್ತೈದು ವರ್ಷ ಸಾಧನೆ ಮಹತ್ವದ್ದು, ಐಟಿ ಉದ್ಯಮ ಇಷ್ಟೊಂದು ಬೆಳೆದರೂ ಉದ್ಯಮಿಗಳಲ್ಲಿ ಇನ್ನೂ ಸಾಕಷ್ಟು ಉತ್ಸಾಹ ಇದೆ‌ ಎಂದರು.

ಪರಿಸರದಲ್ಲಿ ಮನುಷ್ಯ ಅತಿ ಹೆಚ್ಚು ವರ್ಷ ಬದುಕುವ ಜೀವಿ. ಮನುಷ್ಯ ಸಹರಾ ಮರಭೂಮಿಯಲ್ಲಿ, ಚಳಿ ಪ್ರದೇಶ ಅರಣ್ಯ ಎಲ್ಲ ಪ್ರದೇಶದಲ್ಲಿಯೂ ಬದುಕುತ್ತಾನೆ‌. ಮೂಲ ವಿಜ್ಞಾನವನ್ನು ಏಕ ವ್ಯಕ್ತಿಗಳು ಸಂಶೋಧನೆ ಮಾಡುತ್ತಾರೆ‌. ಐಟಿ ಬಿಟಿಯಲ್ಲಿ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿರುತ್ತದೆ. ಐಟಿ ಉದ್ಯಮದಲ್ಲಿ ಗಣಿತದ ಪಾತ್ರ ಮುಖ್ಯವಾಗಿರುತ್ತದೆ‌. ಭಾರತೀಯರು ಗಣಿತದಲ್ಲಿ ಪರಿಣಿತರು. ಐಟಿ ಕ್ಷೇತ್ರದಲ್ಲಿ ಚರ್ಚೆ ನಡೆದಷ್ಟು ಉತ್ತಮ ಫಲಿತಾಂಶ ಹೊರ ಬರುತ್ತದೆ. ನಮ್ಮ ಜೀವನದಲ್ಲಿ ನೆಟ್ವರ್ಕಿಂಗ್ ಅತ್ಯಂತ ಮುಖ್ಯ‌. ಐಟಿಯಲ್ಲಿಯೂ ಅದೇ ಮುಖ್ಯ. ಕೆಲವರು ನಮ್ಮನ್ನು ಅನುಕರಣೆ ಮಾಡಬಹುದು‌. ಆದರೆ, ನಮ್ಮನ್ನು ಓವರ್ ಟೇಕ್ ಮಾಡಲು ಆಗುವುದಿಲ್ಲ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Water Tax ಶಿವಮೊಗ್ಗದ ವಿವಿಧೆಡೆ ನೀರಿನ ಕಂದಾಯ ಪಾವತಿ ಕೌಂಟರ್ ವ್ಯವಸ್ಥೆ.

Water Tax ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ...

Adichunchanagiri Mutt ಏಪ್ರಿಲ್1. ಸರಳ ಸಾಮೂಹಿಕ ವಿವಾಹ & ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ

Adichunchanagiri Mutt ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ...