Sunday, August 2, 2026
Sunday, August 2, 2026

ಶಿವಮೊಗ್ಗದಲ್ಲಿ ಬಾರಿಸು ಕನ್ನಡ ಡಿಂಡಿಮವ ಕಾರ್ಯಕ್ರಮ

Date:

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಸಮನ್ವಯ ಟ್ರಸ್ಟ್ ವತಿಯಿಂದ ನವೆಂಬರ್ 20ರಂದು ಸಂಜೆ 5.30ರಿಂದ ಕ್ಕೆ “ಬಾರಿಸು ಕನ್ನಡ ಡಿಂಡಿಮವ” ಕನ್ನಡ ಚಿತ್ರಗೀತೆಗಳ ವಿಶೇಷ ನೃತ್ಯ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಕನ್ನಡ ನಾಡು ನುಡಿಗೆ ಸಂಬಂಧಿಸಿ ವಿಶೇಷ ಕನ್ನಡ ಚಿತ್ರಗೀತೆಗಳ ಕಾರ್ಯಕ್ರಮ ನಡೆಯಲಿದೆ. ಸಮನ್ವಯ ಟ್ರಸ್ಟ್ ವತಿಯಿಂದ ದತ್ತು ಸ್ವೀಕರಿಸಿರುವ ಒಡ್ಡಿನಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕೌಶಲ್ಯ ಶಾಲೆ ವಿದ್ಯಾರ್ಥಿಗಳು ಹಾಗೂ ಸಮನ್ವಯ ಸೇವಕರು ನೃತ್ಯ ಗಾಯನ ನಡೆಸಿಕೊಡಲಿದ್ದಾರೆ.

ಶೌರ್ಯ ಪ್ರಶಸ್ತಿ ವಿಜೇತೆ ಪ್ರಾರ್ಥನಾ “ಬಾರಿಸು ಕನ್ನಡ ಡಿಂಡಿಮವ” ಕಾರ್ಯಕ್ರಮ ಉದ್ಘಾಟಿಸುವರು. ಕೆನರಾ ಬ್ಯಾಂಕ್ ಶಿವಮೊಗ್ಗ ಉಪ ಮಹಾಪ್ರಬಂಧಕ ಸಂದೀಪ್ ರಾವ್, ಅಮೃತ್ ನೋನಿ ಸಂಸ್ಥೆಯ ಡಾ. ಎಂ.ಕೆ.ಶ್ರೀನಿವಾಸಮೂರ್ತಿ, ಕೆ ಲೈವ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ರಾಜೇಶ್ ಕೀಳಂಬಿ, ಕೆ ಎಸ್ ಆರ್ ಪಿ ಅಸಿಸ್ಟೆಂಟ್ ಕಮಾಂಡೆಂಟ್ ಅಧಿಕಾರಿ ರಾಚಪ್ಪ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸುವರು. ಸಮನ್ವಯ ಟ್ರಸ್ಟ್ ನಿರ್ದೇಶಕ ಸಮನ್ವಯ ಕಾಶಿ ಅಧ್ಯಕ್ಷತೆ ವಹಿಸುವರು.

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪ್ರತಿ ವರ್ಷ ಸಮನ್ವಯ ಟ್ರಸ್ಟ್‌ ನಿಂದ “ಬಾರಿಸು ಕನ್ನಡ ಡಿಂಡಿಮವ” ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಈ ಬಾರಿ ವಿಶೇಷವಾಗಿ ಕಾರ್ಯಕ್ರಮ ರೂಪಿಸಲಾಗಿದೆ. 50ಕ್ಕೂ ಅಧಿಕ ವಿಶೇಷ ಗೀತೆಗಳ ಗಾಯನ ನಡೆಯಲಿದೆ.
ಕನ್ನಡ ನಾಡು ನುಡಿಗೆ ಸಂಬಂಧಿಸಿದ ಗೀತೆಗಳು, ಮಧುರ ಗೀತೆಗಳು, ಪುನೀತ್ ರಾಜ್ ಕುಮಾರ್ ಗೀತೆಗಳು, ಸ್ಫೂರ್ತಿದಾಯಕ ಗೀತೆಗಳು ಸೇರಿದಂತೆ ವಿಶೇಷ ರೀತಿಯ ಗೀತ ಗಾಯನ ಪ್ರಯತ್ನ ನಡೆಯಲಿದೆ.

ಹೆಚ್ಚಿನ ಮಾಹಿತಿಗೆ ಹಾಗೂ ಕಾರ್ಯಕ್ರಮದ ಉಚಿತ ಪಾಸ್ ಗಳಿಗಾಗಿ 9380233123 ಸಂಪರ್ಕಿಸಬಹುದಾಗಿದೆ. ಕಾರ್ಯಕ್ರಮಕ್ಕೆ ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ಇರುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...