Friday, August 14, 2026
Friday, August 14, 2026

ಮತದಾರರ ಪಟ್ಟಿ ಪರಿಷ್ಕರಣೆ ಅಧಿಕಾರಿಗಳೆಂದು ಹೇಳಿಕೊಂಡು ಅಕ್ರಮ- ಕುಮಾರಸ್ವಾಮಿ

Date:

ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಅಧಿಕಾರಿಗಳಿಂದಲೇ ಅಕ್ರಮ ನಡೆಯುತ್ತಿದ್ದು, ಸರ್ಕಾರಿ ಅಧಿಕಾರಿಗಳು ಎಂದು ಹೇಳಿ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಸರ್ಕಾರದ ನಡವಳಿಕೆ ಸಂಶಯಪಡುವಂತಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಜನರು ಬಿಜೆಪಿ ಸರ್ಕಾರದ ಆಡಳಿತದಿಂದ ಬೇಸತ್ತಿದ್ದಾರೆ. ಈ ಬಾರಿ ಕುತಂತ್ರದಿಂದ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಬಿಜೆಪಿ ಆಡಳಿತದಿಂದ ಜನರು ನೆಮ್ಮದಿಯಾಗಿ ಜೀವನ ಸಾಗಿಸಲು ಕಷ್ಟವಾಗುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇನ್ನು ಇಂದಿನಿಂದ ಜೆಡಿಎಸ್ ಪಂಚರತ್ನ ಯಾತ್ರೆ ನಡೆಯಲಿದ್ದು, ಇಂದಿನಿಂದ 36 ದಿನಗಳ ಕಾಲ ಮೊದಲ ಹಂತದ ಪಂಚರತ್ನ ರಥಯಾತ್ರೆ ನಡೆಯಲಿದೆ. ಮಳೆಯಿಂದಾಗಿ ಪಂಚರತ್ನ ರಥಯಾತ್ರೆ ಮುಂದೂಡಲಾಗಿತ್ತು. ಇಂದಿನಿಂದ ಮತ್ತೆ ಪುನಾರಂಭವಾಗಲಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...