Monday, February 2, 2026
Monday, February 2, 2026

ಮಹದೇಶ್ವರ ಜಾತ್ರೆಗೆ ವನ್ಯಜೀವಿ ಇಲಾಖೆಯ ಕೆಲವು ನಿರ್ಬಂಧಗಳು

Date:

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ಬೇಲದಕುಪ್ಪೆ ಮಹದೇಶ್ವರ ಸ್ವಾಮಿ ಜಾತ್ರೆಗೆ ಈ ಬಾರಿ ರಾಜ್ಯ ಅರಣ್ಯ ಇಲಾಖೆಯು ಭಾರಿ ನಿರ್ಬಂಧಗಳನ್ನು ವಿಧಿಸಿದೆ.

ಜಾನುವಾರು, ಎತ್ತಿನಗಾಡಿಗಳು, ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಸೇರಿದಂತೆ ಹಲವು ಆದೇಶಗಳನ್ನು ಜಾರಿಗೊಳಿಸುವುದಾಗಿ ಅರಣ್ಯ ಇಲಾಖೆ ಮಾಹಿತಿ ನೀಡಿದೆ.

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್‌ಟಿಸಿಎ) ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬೇಲದಕುಪ್ಪೆ ದೇವಾಲಯದ ವಾರ್ಷಿಕ ಜಾತ್ರೆಯ ಕುರಿತು ಸರ್ಕಾರದಿಂದ ಸ್ಥಿತಿ ವರದಿಯನ್ನು ಕೋರಿತ್ತು. ಇದರ ನಂತರ, ರಾಜ್ಯ ಅರಣ್ಯ ಇಲಾಖೆಯು ವನ್ಯಜೀವಿಗಳನ್ನು ರಕ್ಷಿಸಲು ಹಲವಾರು ನಿರ್ಬಂಧಗಳನ್ನು ಜಾರಿಗೊಳಿಸುವುದಾಗಿ ಹೇಳಿದೆ.

ಬೇಲದಕುಪ್ಪೆ ಮಹದೇಶ್ವರ ಸ್ವಾಮಿ ದೇವಸ್ಥಾನವು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪ್ರಮುಖ ಹುಲಿ ಆವಾಸಸ್ಥಾನವನ್ನು ರೂಪಿಸುವ ಹೆಡಿಯಾಲ ಅರಣ್ಯ ವ್ಯಾಪ್ತಿಯಲ್ಲಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ದೇವಾಲಯದಲ್ಲಿ 2020 ಮತ್ತು 2021 ರಲ್ಲಿ ಜಾತ್ರೆಯನ್ನು ನಿಷೇಧಿಸಲಾಗಿತ್ತು. ಈ ಹಿನ್ನೆಲೆ ಈ ಬಾರಿಯ ಜಾತ್ರೆ ಬಾರಿಯ ಜಾತ್ರೆ ಅದ್ಧೂರಿಯಾಗಲಿದೆ ಎಂದು ಅಂದಾಜಿಸಾಗಿದೆ.

ನವೆಂಬರ್ 20 ರಿಂದ 23 ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಜಾತ್ರೆಯ ಪೂರ್ವಭಾವಿಯಾಗಿ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ರಮೇಶ್ ಕುಮಾರ್ ಅವರು ಮಂಗಳವಾರ ದೇವಾಲಯದ ಸ್ಥಳವನ್ನು ಪರಿಶೀಲಿಸಿದ್ದಾರೆ. ಜೊತೆಗೆ ದೇವಾಲಯದ ಟ್ರಸ್ಟಿಗಳೊಂದಿಗೆ ಸಂವಾದ ನಡೆಸಿದ್ದಾರೆ. ಪ್ರತಿವರ್ಷ ಜಾತ್ರೆಯಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಜನ ಸೇರುತ್ತಾರೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸುವವರು ಹೆಚ್ಚಿನವರು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಜಾತ್ರೆ ಸಮಯದಲ್ಲಿ ಬೆಂಗಳೂರು, ಮಂಡ್ಯ ಮುಂತಾದ ಕಡೆಯಿಂದ ಜನರು ಸೇರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...