Thursday, March 19, 2026
Thursday, March 19, 2026

ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು-ಮಂಜುನಾಥ್

Date:

ವಿದ್ಯಾರ್ಥಿಗಳು ಪಠ್ಯ ಪುಸ್ತಕದ ಜೊತೆಗೆ ನಿತ್ಯ ಪತ್ರಿಕೆಗಳನ್ನು ಓದುವ ಅಭ್ಯಾಸ ಮಾಡಿಕೊಳ್ಳಿ. ವಾರಕ್ಕೊಮ್ಮೆ ಬರುವ ಸಾಪ್ತಾಹಿಕ ಪುರವಣಿ ಯನ್ನು ಬಿಡದೆಓದಿ. ಬಹಳ ಜನರು ಮನೆಗೆ ಪತ್ರಿಕೆ ತರಿಸುವ, ಓದುವ ಹವ್ಯಾಸ ಮಾಡಿಕೊಳ್ಳುವ ಮೂಲಕ ಮಕ್ಕಳಲ್ಲಿ ಆಸಕ್ತಿ ಮೂಡಿಸುವ ಪ್ರಯತ್ನ ಮಾಡಬೇಕು. ಶಾಲೆಗಳು ಇತ್ತ ಅಗತ್ಯ ಗಮನ ಹರಿಸಲು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಮನವಿ ಮಾಡಿದರು.

ಅವರು ನಗರದ ಕಲ್ಲಹಳ್ಳಿಯಲ್ಲಿರುವ. ಕೇಂಬ್ರಿಡ್ಜ್ ಇಂಟರ್ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಜಿಲ್ಲಾ ಕಸಾಪ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಕಾರದಲ್ಲಿ ವಿದ್ಯಾರ್ಥಿಗಳಿಗಾಗಿ ಶಾಲಾ ಕಾಲೇಜು ಅಂಗಳದಲ್ಲಿ ಕಥೆ, ಕವನ, ಪ್ರಬಂಧ ರಚನಾ ಕಮ್ಮಟ ನವೆಂಬರ್ 17 ರಂದು ಗುರುವಾರ ಏರ್ಪಡಿಸಲಾಗಿತ್ತು.

ಕಥಾ ರಚನೆಯ ಕುರಿತು ಮಾಹಿತಿ ನೀಡಿದ ಉಪನ್ಯಾಸಕ ಜಿ. ಆರ್. ಲವ ಅವರು ಮಾತನಾಡಿ ಬರೆಯುವ ಮೊದಲು ವಿಚಾರ, ಸಿದ್ದತೆ ಜೊತೆಗೆ ಭಾವ, ಬುದ್ದಿ, ಅನುಭವಗಳನ್ನು ಗಮನಿಸಬೇಕು. ನಿಮಗೆ ಅವಕಾಶಗಳು ಹಲವುಯಿವೆ. ಅದಕ್ಕೆ ಪರಿಶ್ರಮ ವಿರಬೇಕು ಎಂದು ವಿವರಿಸಿದರು.

ಸಂಶೋಧನಾ ವಿದ್ಯಾರ್ಥಿ, ಕವಯಿತ್ರಿ ಕು. ಕಾವ್ಯ ಅವರು ಕವನಗಳನ್ನು ಕುರಿತು ಮಾತನಾಡಿ ರಾಮಾಯಣ, ಮಹಾಭಾರತ ಎಲ್ಲವೂ ಲೇಖಕರ ಸೃಷ್ಟಿಯಾಗಿದೆ. ಒಂದು ಗೀಜಗ ಗೂಡುಕಟ್ಟುವಾಗ ಅದು ಒಂದೇ ದಿನದಲ್ಲಿ ಆಗೋದಿಲ್ಲ. ಒಂದೇ ಹುಲ್ಲಿನಿಂದ ಆಗೋದಿಲ್ಲ. ಬೇರೆ ಬೇರೆ ಪದಗಳು, ಅರ್ಥ, ಭಾವಗಳ ಜೊತೆ ಭಾವನೆಗಳನ್ನು ಕಟ್ಟುವ ಮೂಲಕ ಕಾವ್ಯ ಸೃಷ್ಟಿ ಯಾಗಬೇಕು. ಕಾವ್ಯ ಲಕ್ಷಣ ಸುಲಭವಲ್ಲ ಎಂದು ವಿವರಿಸಿದರು.
ಪ್ರಬಂಧ ವಿಚಾರವಾಗಿ ಮಾತನಾಡಿದ ಸಾಹಿತಿಗಳು, ವಿಶ್ರಾಂತ ಪ್ರಾಂಶುಪಾಲರಾದ ಡಾ. ಎಚ್. ಟಿ. ಕೃಷ್ಣಮೂರ್ತಿ ಅವರು ಕಥೆ, ಕವಿತೆ, ಪ್ರಬಂಧ ಗಳು ಲೇಖಕ ತನ್ನ ಬೇಸರ, ಸಂತಸ, ನೋವು, ನಲಿವು ಎಲ್ಲವನ್ನೂ ಅಭಿವ್ಯಕ್ತಿಸಲು ಬಳಸಿಕೊಳ್ಳಬಹುದು. ನಮ್ಮ ಆಧ್ಯತೆ ಯಾವುದು, ನಮ್ಮ ಮನದಲ್ಲಿ ಕುಳಿತಿರುವ ವಿಚಾರ, ನಮ್ಮನ್ನು ಕಾಡುವ, ನಮ್ಮ ಆಸಕ್ತಿ ಎಲ್ಲವೂ ಪ್ರಭಾವ ಬೀರುತ್ತವೆ ಎಂದರಲ್ಲದೆ ಜ್ಞಾನ ಪಡೆಯಲು ಓದಬೇಕು. ಅದರಿಂದ ಮತ್ತಷ್ಟು ಪ್ರೇರಣೆ ದೊರೆಯಲಿದೆ ಎಂದು ಮಾಹಿತಿ ನೀಡಿದರು.
‌ ಸಂಸ್ಥೆಯ ಪ್ರಿನ್ಸಿಪಾಲ್ ಶಾರದಾ ಎಸ್. ನಾಯಕ್ ಅವರು ಅಧ್ಯಕ್ಷತೆ ವಹಿಸಿದ್ದರು. ಕಸಾಪ ತಾ. ಕಾರ್ಯದರ್ಶಿ ಅನುರಾಧ, ಜಿಕಸಾಸಾಂ. ವೇದಿಕೆಯ ಶ್ರೀನಿವಾಸ ನಗಲಾಪುರ ಉಪಸ್ಥಿತರಿದ್ದರು. ಕನ್ನಡ ಭಾಷಾ ಶಿಕ್ಷಕರಾದ ಲತಾ ಸ್ವಾಗತಿಸಿದರು. ಉಪ ಪ್ರಾಂಶುಪಾಲರಾದ ದೀಪಕ್ ವಂದಿಸಿದರು. ಶಿಕ್ಷಕಿ ಸಿರಿ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...