Friday, June 19, 2026
Friday, June 19, 2026

ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ ತೀರ್ಥಹಳ್ಳಿಯಲ್ಲಿ ಪೋಲಿಸ್ ದಾಳಿ

Date:

ಮಂಗಳೂರು ಆಟೋದಲ್ಲಿ ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರರಿಗೆ ಸಂಬಂಧಪಟ್ಟಿದೆ ಎನ್ನಲಾದ ತೀರ್ಥಹಳ್ಳಿಯ 5 ಮನೆಗಳ ಮೇಲೆ ಇಂದು ಬೆಳಗಿನ ಜಾವ ಪೊಲೀಸರಿಂದ ದಾಳಿ ನಡೆಸಿದ್ದಾರೆ.

ಮಂಗಳೂರು ಕೋರ್ಟ್‌ ನಿಂದ ಸರ್ಚ್‌ ವಾರೆಂಟ್‌ ಪಡೆದು ಈ ದಾಳಿ ನಡೆಸಲಾಗಿದೆ. ಮೋಸ್ಟ್‌ ವಾಂಟೆಡ್‌ ಮತೀನ್‌ , ಬಂಧಿತ ಮಾಜ್‌ ಗೆ ಸಂಬಂಧಿಸಿದ ಎರಡು ಮನೆಗಳು ಮೇಲೂ ಪೊಲೀಸರು ದಾಳಿ ನಡೆಸಿ ಶೋಧ ನಡೆಸಿದ್ದಾರೆ. ಸಾಜಿದ್‌ ಮತ್ತು ಶಾರೀಕ್‌ ಸಂಬಂಧಿಯೊಬ್ಬರ ಮನೆಯಲ್ಲೂ ಪರಿಶೀಲನೆ ನಡೆದಿದೆ. ತೀರ್ಥಹಳ್ಳಿ ಡಿವೈಎಸ್ಪಿ ಶಾಂತವೀರಯ್ಯ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ಆಗುಂಬೆ ಠಾಣಾಧಿಕಾರಿ ಶಿವಕುಮಾರ್‌, ಮಾಳೂರು ಠಾಣಾಧಿಕಾರಿ ಪ್ರವೀಣ್‌ ನೀಲಮ್ಮನವರ್‌ ಮತ್ತು ಸಿಬ್ಬಂದಿ ದಾಳಿಯಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಆರೋಪಿಗಳು ಎಸಗಿದ ಕೃತ್ಯಗಳ ಕುರಿತು ಕೆಲವು ಸಾಕ್ಷ್ಯಾಧಾರಗಳು ಮತ್ತು ಮಹತ್ವದ ಸುಳಿವುಗಳು ಲಭ್ಯವಾಗಿವೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...