Thursday, December 18, 2025
Thursday, December 18, 2025

ತಮಿಳುನಾಡು: ಚೆನ್ನೈ ಸೇರಿದಂತೆ ವರ್ಷಾಧಾರೆ. ಶಾಲಾಕಾಲೇಜಿಗೆ ರಜೆ ಘೋಷಣೆ.

Date:

ಎಡಬಿಡದೆ ಚೆನ್ನೈ ನಗರವನ್ನು ಹಾಗೂ ತಮಿಳುನಾಡಿನ ಕೆಲವು ಭಾಗಗಳನ್ನು ಕಾಡಿದ ವರುಣನಿಗೆ ಇನ್ನೂ ತೃಪ್ತಿಯಾಗಿಲ್ಲ.

ಆಸ್ತಿ-ಪಾಸ್ತಿ, ಜೀವಹಾನಿ ಎಲ್ಲವೂ ಆಗುತ್ತಿದೆ. ಹದಿನಾಲ್ಕು ಜನ ಸಾವನ್ನಪ್ಪಿದ್ದಾರೆ. 157 ಜಾನುವಾರು ಮೃತಪಟ್ಟಿದೆ. ಸಾವಿರಕ್ಕೂ ಹೆಚ್ಚು ಮನೆಗಳು ಕುಸಿದಿವೆ. 10 ಸಾವಿರ ಜನರಿಗೆ ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ತಮಿಳುನಾಡು ಕಂದಾಯ ಸಚಿವ ರಾಮಚಂದ್ರನ್ ತಿಳಿಸಿದ್ದಾರೆ.

ಶ್ರೀಮತಿ ರಾಜೇಶ್ವರಿ ಎಂಬ ಮಹಿಳಾ ಇನ್ಸ್ಪೆಕ್ಟರ್, ಅರೆ ಪ್ರಜ್ಞಾವಸ್ಥೆಯಲ್ಲಿದ್ದ ವಿಜಯ್ ಕುಮಾರ್ ಎಂಬವರನ್ನು ಹೆಗಲ ಮೇಲೆ ಹೊತ್ತು ,ಸಾಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪೊಲೀಸ್ ಸಿಬ್ಬಂದಿಯೂ 1840 ಪುರುಷರು, 1963 ಮಹಿಳೆಯರು, 994 ಮಕ್ಕಳು ಮತ್ತು 9 ತೃತೀಯಲಿಂಗಿ ಗಳನ್ನು ಮಳೆಯಿಂದ ರಕ್ಷಿಸಲಾಗಿದೆ. ಇವರೆಲ್ಲರನ್ನೂ ಚೆನ್ನೈ ಕಾರ್ಪೋರೇಷನ್ನಿನ 87 ವಸತಿ ಕೇಂದ್ರಗಳಲ್ಲಿ ದಾಖಲು ಮಾಡಲಾಗಿದೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ಇಡೀ ತಮಿಳುನಾಡಿನ ಸಂಕಷ್ಟಕ್ಕೆ ಕಾರಣವಾಗಿದೆ. ಮಳೆಯಿಂದಾಗಿ ಸಂಚಾರವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಚೆನ್ನೈ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಐದು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ಚೆನ್ನೈಗೆ ಆಗಮಿಸಬೇಕಿದ್ದ 14 ವಿಮಾನಗಳನ್ನು ಬೇರೆ ಕಡೆಗೆ ಕಳುಹಿಸಲಾಯಿತು. ಹಾಗೂ 22 ವಿಮಾನಗಳನ್ನು ರದ್ದುಗೊಳಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...

Department of Agriculture 2026 ಜನವರಿ 6. ಕೃಷಿ ಇಲಾಖೆಯಿಂದ “ಸಿರಿಧಾನ್ಯ & ಮರೆತು ಹೋದ ಖಾದ್ಯಗಳ ಪಾಕ ತಯಾರಿ” ಸ್ಪರ್ಧೆ

Department of Agriculture ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ...

Shivamogga Police ಶಿಕಾರಿಪುರ- ಚುರ್ಚುಗುಂಡಿಯಿಂದ ಯುವಕ ನಾಪತ್ತೆ, ಪೊಲೀಸ್ ಪ್ರಕಟಣೆ

Shivamogga Police ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...