Sunday, August 23, 2026
Sunday, August 23, 2026

ಹಿರಿಯ ನಾಗರಿಕರಿಗೆ ತಿಮ್ಮಪ್ಪನ ದರ್ಶನಕ್ಕೆ ವಿಶೇಷ ಸಮಯಾವಕಾಶ

Date:

ಹಿರಿಯ ನಾಗರಿಕರಿಗೆ ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಇನ್ನು ಸುಲಭವಾಗಲಿದೆ.
ಹಿರಿಯ ನಾಗರಿಕರಿಗಾಗಿಯೇ ಎರಡು ಸ್ಲಾಟ್‌ಗಳನ್ನು ಟಿಟಿಡಿ ಮೀಸಲಿಟ್ಟಿದೆ.

ಪ್ರತಿ ದಿನ ಬೆಳಗ್ಗೆ 10 ಗಂಟೆ, ಮಧ್ಯಾಹ್ನ 3 ಗಂಟೆ ಸ್ಲಾಟ್‌ನಲ್ಲಿ ವಿಶೇಷವಾಗಿ ಹಿರಿಯ ನಾಗರಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.
ಇದಕ್ಕಾಗಿ ವಯಸ್ಸು ನಮೂದಿಸಿರುವ ಪೋಟೋ ಇರುವ ಗುರುತಿನ ಪತ್ರ(ಆಧಾರ್‌)ವನ್ನು ಕೌಂಟರ್‌ನಲ್ಲಿ ಅವರು ತೋರಿಸಬೇಕಾಗುವುದು ಕಡ್ಡಾಯ.

ದರ್ಶನ ಉಚಿತವಾಗಿದೆ. ಜತೆಗೆ ಒಬ್ಬರಿಗೆ ಎರಡು ಲಾಡು ಪ್ರಸಾದಕ್ಕೆ 20 ರೂ. ಹಾಗೂ ಹೆಚ್ಚುವರಿ ಪ್ರತಿ ಲಾಡುಗೆ 25 ರೂ. ನೀಡಬೇಕಾಗುತ್ತದೆ.
ಹಿರಿಯ ನಾಗರಿಕರಿಗಾಗಿ ವಿಶೇಷ ಪಥ ನಿರ್ಮಿಲಾಗಿದೆ. ಅವರು ಮೆಟ್ಟಿಲು ಹತ್ತಬೇಕಾಗಿಲ್ಲ.

ದರ್ಶನದ ವೇಳೆ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ.
ಕಾರ್‌ ಪಾರ್ಕಿಂಗ್‌ನಿಂದ ದೇಗುಲ ಬಾಗಿಲಿಗೆ ಕರೆತರಲು ಬ್ಯಾಟರಿ ಕಾರ್‌ ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಾಗರಿಕರ ಸ್ಲಾಟ್‌ 30 ನಿಮಿಷಗಳು ಇದ್ದು, ಅಲ್ಲಿಯವರೆಗೆ ಇತರರ ದರ್ಶನ ಸ್ಥಗಿತಗೊಳಿಸಲಾಗುವುದು ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...