Tuesday, May 5, 2026
Tuesday, May 5, 2026

ಪುನೀತ್ ಅಗಲಿಕೆ : ರಜನಿ, ಕಂಬನಿ

Date:

ರಜನಿ: ಕಂಬನಿ

” ಪುನೀತ್ ನನ್ನ ಕಣ್ಮುಂದೆ ಬೆಳೆದ ಪ್ರೀತಿಪಾತ್ರ ಮತ್ತು ಪ್ರತಿಭಾವಂತ ಮಗು..” ಎಂದು ತಮ್ಮ ಸಂತಾಪ ಸಂದೇಶವನ್ನ ದಕ್ಷಿಣಭಾರತದ ಖ್ಯಾತ ನಟ ಮತ್ತು ಫಾಲ್ಕೆ ಪ್ರಶಸ್ತಿ ಪುರಸ್ಕೃತ ಶ್ರೀರಜನಿಕಾಂತ್ ,
ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಹಿರಿಯನಟ ರಜನಿ ಮುಂದುವರೆದು ತಮ್ಮ ಸಂದೇಶದಲ್ಲಿ
” ಯಶಸ್ಸಿನ ಉತ್ತುಂಗದಲ್ಲಿ ಇರುವಾಗಲೇ ನಮ್ಮನ್ನು ಅವರು ಅಗಲಿರುವುದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಲು ಮಾತುಗಳೇ ಬರುತ್ತಿಲ್ಲ. ಪುನೀತ್ ಆತ್ಮಕ್ಕೆ ಶಾಂತಿ ಸಿಗಲಿ ” ಎಂದು ತಮ್ಮ ಎದೆಯಾಳದ ಅಗಲಿಕೆಯ ನೋವನ್ನ ಹಂಚಿಕೊಂಡಿದ್ದಾರೆ
ಪುನೀತ್ ನಿಧನದ ಸಂರ್ಭದಲ್ಲಿ ರಜನಿಕಾಂತ್ ಕಾವೇರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.ಈ ಕಾರಣ ಅವರು ಪುನೀತ್ ಅವರ ಅಂತಿಮ ದರ್ಶನಕ್ಕೆ ಬರಲಾಗಿರಲಿಲ್ಲ.
ಈಗ ಚೇತರಿಸಿಕೊಂಡ ಕೂಡಲೇ ತಮ್ಮ ಸಂತಾಪವನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...