ರಜನಿ: ಕಂಬನಿ
” ಪುನೀತ್ ನನ್ನ ಕಣ್ಮುಂದೆ ಬೆಳೆದ ಪ್ರೀತಿಪಾತ್ರ ಮತ್ತು ಪ್ರತಿಭಾವಂತ ಮಗು..” ಎಂದು ತಮ್ಮ ಸಂತಾಪ ಸಂದೇಶವನ್ನ ದಕ್ಷಿಣಭಾರತದ ಖ್ಯಾತ ನಟ ಮತ್ತು ಫಾಲ್ಕೆ ಪ್ರಶಸ್ತಿ ಪುರಸ್ಕೃತ ಶ್ರೀರಜನಿಕಾಂತ್ ,
ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಹಿರಿಯನಟ ರಜನಿ ಮುಂದುವರೆದು ತಮ್ಮ ಸಂದೇಶದಲ್ಲಿ
” ಯಶಸ್ಸಿನ ಉತ್ತುಂಗದಲ್ಲಿ ಇರುವಾಗಲೇ ನಮ್ಮನ್ನು ಅವರು ಅಗಲಿರುವುದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಲು ಮಾತುಗಳೇ ಬರುತ್ತಿಲ್ಲ. ಪುನೀತ್ ಆತ್ಮಕ್ಕೆ ಶಾಂತಿ ಸಿಗಲಿ ” ಎಂದು ತಮ್ಮ ಎದೆಯಾಳದ ಅಗಲಿಕೆಯ ನೋವನ್ನ ಹಂಚಿಕೊಂಡಿದ್ದಾರೆ
ಪುನೀತ್ ನಿಧನದ ಸಂರ್ಭದಲ್ಲಿ ರಜನಿಕಾಂತ್ ಕಾವೇರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.ಈ ಕಾರಣ ಅವರು ಪುನೀತ್ ಅವರ ಅಂತಿಮ ದರ್ಶನಕ್ಕೆ ಬರಲಾಗಿರಲಿಲ್ಲ.
ಈಗ ಚೇತರಿಸಿಕೊಂಡ ಕೂಡಲೇ ತಮ್ಮ ಸಂತಾಪವನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.