Wednesday, December 17, 2025
Wednesday, December 17, 2025

ಉದ್ಯಮಶೀಲತೆ ತರಬೇತಿಯಲ್ಲಿ ಮುಂಚೂಣಿಯಲ್ಲಿದೆ ಕೆನರಾ ಬ್ಯಾಂಕ್ ಉದ್ಯೋಗ ತರಬೇತಿ ಕೇಂದ್ರ

Date:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ಕುಮಟಾ 2000ರಲ್ಲಿ ಅಕ್ಟೋಬರ್ 02 ಪ್ರಾರಂಭಗೊಂಡಿತು.
ಕಳೆದ 20 ವರ್ಷಗಳಲ್ಲಿ ಹಲವಾರು ತರಬೇತಿಗಳನ್ನು ನೀಡುತ್ತಾ ಬಂದಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ಸಂಸ್ಥೆಯು ಕಾರ್ಯ ನಿರ್ವಹಿಸುತ್ತಿದೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು 2000 ದಿಂದ 2022 ರವರೆಗೆ ಸುಮಾರು 18 ರಿಂದ 20 ಸಾವಿರ ಜನರಿಗೆ ತರಬೇತಿಯನ್ನು ನೀಡಿದೆ.

ಗ್ರಾಮೀಣ ಭಾಗದಲ್ಲಿರುವಂತಹ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗದ ಕುರಿತು ತರಬೇತಿ ನೀಡಿ ಅವರನ್ನ ಉದ್ಯಮಶೀಲರನ್ನಾಗಿ ಮಾಡುವುದು ಈ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ.

ಯಾರು ಕೂಡ ಉದ್ಯೋಗ ವಂಚಿತರಾಗದಿರಲಿ ಎಂಬ ಮುಖ್ಯ ಉದ್ದೇಶದಿಂದ ಈ ಸಂಸ್ಥೆಯು ಪ್ರಾರಂಭಗೊಂಡಿತು. ಇಂದಿನ ಯುಗದಲ್ಲಿ ಸರ್ಕಾರಿ ಕೆಲಸ ಎಲ್ಲರಿಗೂ ಸಿಗಲು ಸಾಧ್ಯವಿಲ್ಲ. ಗ್ರಾಮೀಣ ಭಾಗದ ಜನರು ಸ್ವ ಉದ್ಯೋಗದ ಮೂಲಕ ಬದುಕನ್ನ ರೂಪಿಸಿಕೊಳ್ಳಲು ಈ ಸಂಸ್ಥೆಯು ನೆರವಾಗುತ್ತಿದೆ.

ಈ ತರಬೇತಿ ಕೇಂದ್ರದ ಅಧ್ಯಕ್ಷರಾಗಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗಡೆಯವರು ಕಾರ್ಯನಿರ್ವಹಿಸುತ್ತಿದ್ದಾರೆ.
ಕೆನರಾ ಬ್ಯಾಂಕ್ ನ ಪ್ರಯೋಜಿತದಲ್ಲಿ ಈ ಸಂಸ್ಥೆಯು ಬೆಳೆಯುತ್ತಿದೆ.

ಇಲ್ಲಿ ತರಬೇತಿಯನ್ನ ಪಡೆಯಲು 18 ವರ್ಷ ಮೇಲ್ಪಟ್ಟ 45 ವರ್ಷದ ನಿರುದ್ಯೋಗ ಯುವಕ ಯುವತಿಯರು ಅರ್ಹರಾಗಿರುತ್ತಾರೆ.

ಈ ತರಬೇತಿ ಸಂಸ್ಥೆಯಲ್ಲಿ ಮಿಕ್ಸಿ ರಿಪೇರಿ, ಟಿವಿ ರಿಪೇರಿ, ಬ್ಯೂಟಿಷಿಯನ್ ಕೋರ್ಸ್, ಟೈಲರಿಂಗ್, ಕೋಳಿ ಸಾಕಾಣಿಕೆ, ಕಂಪ್ಯೂಟರ್ ಟ್ಯಾಲಿ, ಸೇರಿದಂತೆ ಇನ್ನೂ ಅನೇಕ ರೀತಿಯ ತರಬೇತಿಗಳನ್ನು ನೀಡಲಾಗುತ್ತದೆ.

ಗ್ರಾಮೀಣ ಭಾಗದಲ್ಲಿರುವ ಬಿಪಿಎಲ್ ಕಾರ್ಡ್ ದಾರರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ಈಗಾಗಲೇ ಈ ಸಂಸ್ಥೆಯಲ್ಲಿ ತರಬೇತಿ ಪಡೆದ ಶೇ. 70%ಕ್ಕೂ ಹೆಚ್ಚು ಜನರು ಸ್ವಉದ್ಯೋಗವನ್ನು ಪ್ರಾರಂಭಿಸಿದ್ದಾರೆ.
ಇಲ್ಲಿ ತರಬೇತಿ ಪಡೆದ ಹಲವರು ಗ್ರಾಮೀಣ ಭಾಗದ ಅನೇಕ ಜನರಿಗೆ ತರಬೇತಿ ನೀಡಿದ್ದಾರೆ.
ತರಬೇತಿಯ ನಂತರದಲ್ಲಿ ತರಬೇತಿದಾರರು ಸ್ವಉದ್ಯೋಗ ಪ್ರಾರಂಭಿಸಲು ಇಚ್ಚಿಸಿದಾಗ ಹಣಕಾಸಿನ ಸಮಸ್ಯೆ ಎದುರಾದಲ್ಲಿ ಅವರು ಯಾವ ಬ್ಯಾಂಕಿನಲ್ಲಿ ವ್ಯವಹರಿಸುತ್ತಾರೋ ಅಲ್ಲಿ ಕೆನರಾ ಬ್ಯಾಂಕ್ ಗ್ರಾಮೀಣ ತರಬೇತಿ ಕೇಂದ್ರದ ವತಿಯಿಂದ ಶಿಫಾರಸು ಮಾಡಲಾಗುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...