Thursday, June 18, 2026
Thursday, June 18, 2026

ಪುಣ್ಯಕೋಟಿ ಯೋಜನೆಗೆ ದೇಣಿಗೆ ನೀಡಿದರೆ ಆದಾಯ ತೆರಿಗೆ ವಿನಾಯಿತಿ

Date:

ರಾಜ್ಯ ಸರ್ಕಾರಿ ನೌಕರ’ರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಪುಣ್ಯಕೋಟಿ ದತ್ತು ಯೋಜನೆ ದೇಣಿಗೆಗೆ ‘ಆದಾಯ ತೆರಿಗೆ’ ವಿನಾಯಿತಿ ಘೋಷಿಸಿ ಆದೇಶ ಹೊರಡಿಸಿದೆ.

ಈ ಕುರಿತು ಬಿ.ಎನ್ ಪ್ರವೀಣ್ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರ ವೇತನದಿಂದ ಕಟಾವು ಮಾಡಲಾದ ವಂತಿಗೆ ಮೊತ್ತಕ್ಕೆ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಹೊಂದಿರುವ ಆದಾಯ ತೆರಿಗೆ ವಿನಾಯಿತಿ ಅನ್ವಯ ಕ್ರಮಕೈಗೊಂಡು ಆದಾಯ ತೆರಿಗೆ ಅಧಿನಿಯಮ, 1961ರ ಕಲಂ 80(ಜಿ) ವಿನಾಯಿತಿ ನೀಡಿ ಆದೇಶ ಹೊರಡಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಕೋರಿದ್ದರ ಹಿನ್ನಲೆಯಲ್ಲಿ ಈ ಬಗ್ಗೆ ಸೂಕ್ತ ಹೊರಡಿಸುವ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಮುಂದಿನ ಕ್ರಮವಹಿಸುವಂತೆ ಕೋರಿರುತ್ತದೆ.

ಅದರಂತೆ ಆದಾಯ ತೆರಿಗೆ ಕಾಯ್ದೆ 1961 ರ ಸೆಕ್ಷನ್ 80G ರನ್ವಯ ತೆರಿಗೆ ವಿನಾಯಿತಿ ಇದ್ದು, ಅದರಂತೆ ಮಣ್ಯಕೋಟಿ ದತ್ತು ಯೋಜನೆಗೆ ವಂತಿಗೆಯನ್ನು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಗೆ ನೀಡಿದ ಅಧಿಕಾರಿ/ನೌಕರರು ಸೆಕ್ಷನ್ 80G ರನ್ವಯ ವಿನಾಯಿತಿ ಪಡೆಯಬಹುದಾಗಿರುತ್ತದೆ ಎಂದು ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...