Wednesday, October 2, 2024
Wednesday, October 2, 2024

ತಳಮಟ್ಟದಿಂದ ಪಕ್ಷ ಚಟುವಟಿಕೆ ಆರಂಭಿಸಿದ ಬಿಜೆಪಿ

Date:

ಕಮಲಪಡೆಯ ತಳಮಟ್ಟದ ಕಾರ್ಯಪಡೆ ಬಿಡುವಿಲ್ಲದ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು, 2023ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಮತ್ತೊಮ್ಮೆ ಜಯಭೇರಿ ಬಾರಿಸುವುದಕ್ಕೆ ಪೂರಕ ವಾತಾವರಣ ಸೃಷ್ಟಿಗೆ ಬೆವರಿಳಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿದ ಪ್ರತಿ ಬಾರಿ ‘ಡಬಲ್ ಇಂಜಿನ್ ಸರ್ಕಾರ’ದ ಪ್ರಯೋಜನದ ಮೇಲೆ ಹೆಚ್ಚೆಚ್ಚು ಬೆಳಕು ಚೆಲ್ಲಿ, ಪಕ್ಷದ ರಾಜ್ಯ ನಾಯಕರ ಮಾರ್ಗಪಥ ಏನೆಂಬುದು ಸೂಚ್ಯವಾಗಿ ತಿಳಿಸಿದ್ದಾರೆ.

ಮೋದಿ ಸೂಚನೆಯಂತೆ ಪಕ್ಷದ ಸಂಘಟನಾ ಕಾರ್ಯಯೋಜನೆಯಲ್ಲಿ ‘ಮನೆ ಮನೆಗೆ ಅಭಿಯಾನ’ ಸೇರಿಸಿ, ಜನರ ಮನೆ ಬಾಗಿಲಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳ ಮಾಹಿತಿ ನೀಡುವ ಚಟುವಟಿಕೆ ಹಮ್ಮಿಕೊಳ್ಳಲಾಗಿದೆ.

ಪ್ರತಿಯೊಂದು ಬೂತ್ಗೆ 12 ಜನ ಸಕ್ರಿಯ ಸದಸ್ಯರ ತಂಡವನ್ನು ನೇಮಿಸಿ ಅಭಿಯಾನದ ಹೊಣೆ ಒಪ್ಪಿಸಿದ್ದು, ವಿವಿಧ ಹಂತದ ಪದಾಧಿಕಾರಿಗಳು ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ನಗರ-ಗ್ರಾಮೀಣ ಪ್ರದೇಶದ ಪ್ರತಿಯೊಂದು ಅರ್ಹ ಕುಟುಂಬ ಡಬಲ್ ಇಂಜಿನ್ ಸರ್ಕಾರದ ಒಂದಲ್ಲ, ಒಂದು ಯೋಜನೆ ಫಲಾನುಭವಿ ಆಗಿರುವ ಮಾಹಿತಿಯನ್ನೂ ನಿಯೋಜಿತ ತಂಡಗಳು ಹಂಚಿಕೊಳ್ಳುತ್ತಿವೆ. ಕೇಂದ್ರ-ರಾಜ್ಯ ಸರ್ಕಾರದ ಬಗ್ಗೆ ವ್ಯಾಪಕ ಪ್ರಚಾರವೆಂದು ಮೇಲ್ನೋಟಕ್ಕೆ ಕಂಡು ಬಂದರೂ ಜನಪರ ಯೋಜನೆ, ಕಾರ್ಯಕ್ರಮಗಳ ಗರಿಷ್ಠ ಲಾಭ ಪಡೆಯಲಿ ಎಂಬುದು ಅಭಿಯಾನದ ಆಶಯವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...