Wednesday, October 2, 2024
Wednesday, October 2, 2024

ಆರ್ಥಿಕ ಸ್ಥಿತಿ ಪರಿಗಣಿಸಿ ಮೀಸಲಾತಿ ಕಲ್ಪಿಸಿ- ಕುಮಾರಸ್ವಾಮಿ

Date:

ರಾಜ್ಯದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವ ಬದಲಿಗೆ ಆಯಾ ಸಮಾಜಗಳ ಆರ್ಥಿಕ ಪರಿಸ್ಥಿತಿ ಆಧರಿಸಿ ಮೀಸಲಾತಿ ಕಲ್ಪಿಸುವ ಮೂಲಕ ದೇಶದಲ್ಲಿ ಬಡತನ ನಿರ್ಮೂಲನೆ ಮಾಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲೆಡೆ ಮೀಸಲಾತಿ ನೀಡಬೇಕೆಂದು ವಿವಿಧ ಸಮಾಜದವರು ಒತ್ತಾಯ ಮಾಡುತ್ತಿದ್ದಾರೆ.
ಜನಸಂಖ್ಯೆ ಆಧಾರವಾಗಿಟ್ಟುಕೊಂಡು ಮೀಸಲಾತಿ ನೀಡುತ್ತಾ ಬಂದಿದ್ದೇವೆ. ಆದರೂ ಬಡತನ ನಿರ್ಮೂಲನೆ ಆಗಿಲ್ಲ.

ಆದ್ದರಿಂದ, ಜನಸಂಖ್ಯೆಗಿಂತಲೂ ಸಮಾಜದ ಆರ್ಥಿಕ ಪರಿಸ್ಥಿತಿ ಗಮನಿಸಿ ಮೀಸಲಾತಿ ಸೌಲಭ್ಯ ನೀಡುವ ಮೂಲಕ ಬಡತನ ನಿರ್ಮೂಲನೆ ಮಾಡಬೇಕು ಎಂದರು.

ಒಕ್ಕಲಿಗ ಸಮಾಜಕ್ಕೆ ಮೀಸಲಾತಿ ಹೆಚ್ಚಿಸಲು ಸರ್ಕಾರಕ್ಕೆ ಗಡುವು ನೀಡಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಶೇ.12ರಷ್ಟು ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಒಕ್ಕಲಿಗರ ಜನಸಂಖ್ಯೆ ಉಪಜಾತಿಗಳು ಸಹಿತ ಆರ್ಥಿಕ ಪರಿಸ್ಥಿತಿಯ ವರದಿಯನ್ನು ಸಿದ್ಧಪಡಿಸಿಕೊಂಡು ಸರ್ಕಾರಕ್ಕೆ ಗಡುವು ನೀಡಬೇಕು ಎಂದು ಸಲಹೆ ನೀಡಿರುವುದಾಗಿ ಸ್ಪಷ್ಟಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...