Wednesday, July 8, 2026
Wednesday, July 8, 2026

30 ವರ್ಷಮೀರಿದ ಪ್ರತೀ ವ್ಯಕ್ತಿಗೂ ನಮ್ಮ ಕ್ಲಿನಿಕ್ ನಲ್ಲಿ ಮಧುಮೇಹ ತಪಾಸಣೆ

Date:

ನಮ್ಮ ಕ್ಲಿನಿಕ್ ಗಳ ಮೂಲಕ 30 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಗೂ ಮಧುಮೇಹ ತಪಾಸಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದ ಆರೋಗ್ಯ ಸಿಟಿ ಸಮ್ಮಿಟ್ ನಲ್ಲಿ ಮಾತನಾಡಿದ ಅವರು, ಮಧುಮೇಹ ಸೇರಿದಂತೆ ಅಸಾಂಕ್ರಾಮಿಕ ರೋಗಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ನಮ್ಮ ಕ್ಲೀನಿಕ್ ಗಳ ಮೂಲಕ 30 ವರ್ಷ ಮೀರಿದ ಪ್ರತಿಯೊಬ್ಬರಿಗೂ ಮಧುಮೇಹ ತಪಾಸಣೆ ಮಾಡಲಾಗುವುದು ಎಂದರು.

ರಾಜ್ಯದ ವಿವಿಧ ನಗರಗಳಲ್ಲಿ 438 ನಮ್ಮ ಕ್ಲಿನಿಕ್ ಗಳನ್ನು ಆರಂಭಿಸಲಾಗುವುದು. ಈಗಾಗಲೇ 200ಕ್ಕೂ ಅಧಿಕ ಕ್ಲಿನಿಕ್ ಗಳು ಸಿದ್ಧವಾಗಿದ್ದು, ಈ ತಿಂಗಳಂತೆಕ್ಕೆ 100 ಕ್ಲಿನಿಕ್ ಗಳನ್ನು ಉದ್ಘಾಟಿಸಲಾಗುವುದು.
ಕೊಳಗೇರಿ ಹಾಗೂ ಬಡವರು ವಾಸಿಸುವ ಪ್ರದೇಶದಲ್ಲಿ ಕ್ಲಿನಿಕ್ ಗಳನ್ನು ಆರಂಭಿಸಿ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ 6500ಕ್ಕೂ ಅಧಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಆರಂಭಿಸಲಾಗಿದೆ. ಈ ಕೇಂದ್ರಗಳಲ್ಲಿಯೂ ಮಧುಮೇಹ ತಪಾಸಣೆ ಮಾಡಲಾಗುವುದು. 18 ತಿಂಗಳಲ್ಲಿ ರಾಜ್ಯದ ಶೇ. 100 ರಷ್ಟು ಜನರ ಆರೋಗ್ಯ ತಪಾಸಭೆ ಗುರಿ ಹೊಂದಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...