Thursday, May 14, 2026
Thursday, May 14, 2026

ಜೆಸಿಐ ವಲಯ ನೂತನ ಅಧ್ಯಕ್ಷರಾಗಿ ಅನುಷ್ ಗೌಡ,ಉಪಾಧ್ಯಕ್ಷರಾಗಿ ಸತೀಶ್ ಚಂದ್ರ ಆಯ್ಕೆ

Date:

ಜೆಸಿಐ ವಲಯದ 2023ನೇ ಸಾಲಿನ ನೂತನ ವಲಯ ಅಧ್ಯಕ್ಷರಾಗಿ ಅನುಷ್ ಗೌಡ ಹಾಗೂ ವಲಯ ಉಪಾಧ್ಯಕ್ಷರಾಗಿ ಸತೀಶ್ ಚಂದ್ರ ಆಯ್ಕೆಯಾಗಿದ್ದಾರೆ.

ಜೆಸಿಐ ಅಂತರಾಷ್ಟ್ರೀಯ ಸಂಸ್ಥೆಯ ವಲಯ 24ರ ವಲಯ ಸಮ್ಮೇಳನವನ್ನು ದಾವಣಗೆರೆಯಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಲಯ ಅಧ್ಯಕ್ಷ ಹಾಗೂ ವಲಯ ಉಪಾಧ್ಯಕ್ಷರ ಚುನಾವಣೆಯಲ್ಲಿ ಅತಿ ಹೆಚ್ಚಿನ ಮತಗಳಿಂದ ಜಯಗಳಿಸಿ 2023 ನೇ ಸಾಲಿನ ವಲಯ ಅಧ್ಯಕ್ಷ
ಹಾಗೂ ವಲಯ ಉಪಾಧ್ಯಕ್ಷರ ಆಯ್ಕೆ ನಡೆಯಿತು.

ಜೆಸಿಐ ವಲಯದ 2023ನೇ ಸಾಲಿನ ನೂತನ ವಲಯ ಅಧ್ಯಕ್ಷ ಅನುಷ್ ಗೌಡ ಹಾಗೂ ವಲಯ ಉಪಾಧ್ಯಕ್ಷ ಸತೀಶ್ ಚಂದ್ರ ಅವರಿಗೆ ಮಂಜುನಾಥ್ ಕದಂ, ಕಿಶೋರ್ ಕುಮಾರ್, ವಸಂತ ಹೋಬಳಿದಾರ್, ಜಿ.ವಿಜಯಕುಮಾರ್, ರವೀಂದ್ರನಾಥ ಐತಾಳ್, ಡಾ. ಗುಡದಪ್ಪ ಕಸಬಿ, ಸುರೇಂದ್ರ ಕೋಟ್ಯಾನ್, ಶೇಷಗಿರಿ ಡಿ ಕೆ, ಶುಭಂ ಹೋಟೆಲ್ ಮಾಲೀಕರಾದ ಚಂದ್ರಹಾಸ್ ಶೆಟ್ಟಿ, ಉದಯ ಕದಂಬ, ಹರೀಶ್, ಈಶ್ವರ್, ಸಂತೋಷ್ ಕುಮಾರ್ ಹಾಗೂ ಜೆಸಿಐ ಸಹ್ಯಾದ್ರಿ ಅಧ್ಯಕ್ಷೆ ಸುಷ್ಮಾ, ಕಾರ್ಯದರ್ಶಿ ಡಾ. ಲಲಿತಾ, ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಜಿ ಕುಮಾರಸ್ವಾಮಿ ಹಾಗೂ ಕಾರ್ಯದರ್ಶಿ ಕುಮಾರಸ್ವಾಮಿ, ಎಲ್ಲಾ ಸದಸ್ಯರು ಹಾಗೂ ಜೆಸಿಐ ಶಿವಮೊಗ್ಗ ಸಹ್ಯಾದ್ರಿಯ ಸಂಸ್ಥೆಯ ಎಲ್ಲಾ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಜೆಸಿಐ ಸಂಸ್ಥೆಯು ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಮಾಜಮುಖಿ ಹಾಗೂ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದೆ.

ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಮಹತ್ತರ ಸೇವೆ ಸಲ್ಲಿಸುತ್ತಿದೆ. ಮುಂದಿನ ವರ್ಷದಲ್ಲಿಯೂ ವಲಯ ಮಟ್ಟದಲ್ಲಿ ಉತ್ತಮ ಸೇವಾ ಕಾರ್ಯಗಳನ್ನು ನಡೆಸಲಿ ಎಂದು ಶುಭಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shivamogga ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವುದು ಮನುಷ್ಯರ ಜವಾಬ್ದಾರಿ- ಬಿ.ಜಿ.ಶಿವಮೂರ್ತಿ

Rotary Club Shivamogga ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸುವುದು...

Bhadra dam ಮೇ17 ರ ಮಧ್ಯರಾತ್ರಿಯಿಂದ ಭದ್ರಾ ಬಲ ಮತ್ತು ಎಡದಂಡೆ ಕಾಲುವೆಗಳ ಮೂಲಕ ಹರಿಯುತ್ತಿರುವ ನೀರು ಬಂದ್

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ...

Royal Diamond English Medium School ಮನೆಯೇ ಮೊದಲ ಪಾಠಶಾಲೆ.ತಾಯಿಯೇ ಮೊದಲ ಗುರು- ವೀಣಾ ನಾಯಕ್

Royal Diamond English Medium School ಸಿರಿಗನ್ನಡ ವೇದಿಕೆ, ಮಹಿಳಾ...

Priyanka Kharge ಗ್ರಾಮ ಪಂಚಾಯತ್ ಗಳು ರಾಷ್ಡ್ರಮಟ್ಟದಲ್ಲಿ ಗಮನ ಸೆಳೆದು ಪ್ರಶಸ್ತಿಗೆ ಭಾಜನ: ಸಶಕ್ತೀಕರಣಕ್ಕೆ ಹಿಡಿದ ಕನ್ನಡಿ- ಸಚಿವ ಪ್ರಿಯಾಂಕ ಖರ್ಗೆ

Priyanka Kharge ಕೇಂದ್ರ ಸರ್ಕಾರದಿಂದ ಕೊಡಮಾಡುವ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಕರ್ನಾಟಕದ...