Sunday, August 23, 2026
Sunday, August 23, 2026

ಜೆಸಿಐ ವಲಯ ನೂತನ ಅಧ್ಯಕ್ಷರಾಗಿ ಅನುಷ್ ಗೌಡ,ಉಪಾಧ್ಯಕ್ಷರಾಗಿ ಸತೀಶ್ ಚಂದ್ರ ಆಯ್ಕೆ

Date:

ಜೆಸಿಐ ವಲಯದ 2023ನೇ ಸಾಲಿನ ನೂತನ ವಲಯ ಅಧ್ಯಕ್ಷರಾಗಿ ಅನುಷ್ ಗೌಡ ಹಾಗೂ ವಲಯ ಉಪಾಧ್ಯಕ್ಷರಾಗಿ ಸತೀಶ್ ಚಂದ್ರ ಆಯ್ಕೆಯಾಗಿದ್ದಾರೆ.

ಜೆಸಿಐ ಅಂತರಾಷ್ಟ್ರೀಯ ಸಂಸ್ಥೆಯ ವಲಯ 24ರ ವಲಯ ಸಮ್ಮೇಳನವನ್ನು ದಾವಣಗೆರೆಯಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಲಯ ಅಧ್ಯಕ್ಷ ಹಾಗೂ ವಲಯ ಉಪಾಧ್ಯಕ್ಷರ ಚುನಾವಣೆಯಲ್ಲಿ ಅತಿ ಹೆಚ್ಚಿನ ಮತಗಳಿಂದ ಜಯಗಳಿಸಿ 2023 ನೇ ಸಾಲಿನ ವಲಯ ಅಧ್ಯಕ್ಷ
ಹಾಗೂ ವಲಯ ಉಪಾಧ್ಯಕ್ಷರ ಆಯ್ಕೆ ನಡೆಯಿತು.

ಜೆಸಿಐ ವಲಯದ 2023ನೇ ಸಾಲಿನ ನೂತನ ವಲಯ ಅಧ್ಯಕ್ಷ ಅನುಷ್ ಗೌಡ ಹಾಗೂ ವಲಯ ಉಪಾಧ್ಯಕ್ಷ ಸತೀಶ್ ಚಂದ್ರ ಅವರಿಗೆ ಮಂಜುನಾಥ್ ಕದಂ, ಕಿಶೋರ್ ಕುಮಾರ್, ವಸಂತ ಹೋಬಳಿದಾರ್, ಜಿ.ವಿಜಯಕುಮಾರ್, ರವೀಂದ್ರನಾಥ ಐತಾಳ್, ಡಾ. ಗುಡದಪ್ಪ ಕಸಬಿ, ಸುರೇಂದ್ರ ಕೋಟ್ಯಾನ್, ಶೇಷಗಿರಿ ಡಿ ಕೆ, ಶುಭಂ ಹೋಟೆಲ್ ಮಾಲೀಕರಾದ ಚಂದ್ರಹಾಸ್ ಶೆಟ್ಟಿ, ಉದಯ ಕದಂಬ, ಹರೀಶ್, ಈಶ್ವರ್, ಸಂತೋಷ್ ಕುಮಾರ್ ಹಾಗೂ ಜೆಸಿಐ ಸಹ್ಯಾದ್ರಿ ಅಧ್ಯಕ್ಷೆ ಸುಷ್ಮಾ, ಕಾರ್ಯದರ್ಶಿ ಡಾ. ಲಲಿತಾ, ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಜಿ ಕುಮಾರಸ್ವಾಮಿ ಹಾಗೂ ಕಾರ್ಯದರ್ಶಿ ಕುಮಾರಸ್ವಾಮಿ, ಎಲ್ಲಾ ಸದಸ್ಯರು ಹಾಗೂ ಜೆಸಿಐ ಶಿವಮೊಗ್ಗ ಸಹ್ಯಾದ್ರಿಯ ಸಂಸ್ಥೆಯ ಎಲ್ಲಾ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಜೆಸಿಐ ಸಂಸ್ಥೆಯು ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಮಾಜಮುಖಿ ಹಾಗೂ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದೆ.

ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಮಹತ್ತರ ಸೇವೆ ಸಲ್ಲಿಸುತ್ತಿದೆ. ಮುಂದಿನ ವರ್ಷದಲ್ಲಿಯೂ ವಲಯ ಮಟ್ಟದಲ್ಲಿ ಉತ್ತಮ ಸೇವಾ ಕಾರ್ಯಗಳನ್ನು ನಡೆಸಲಿ ಎಂದು ಶುಭಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...

Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳು

Breaking News ತೀರ್ಥಹಳ್ಳಿ - ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು...

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...