Sunday, August 9, 2026
Sunday, August 9, 2026

ಸಂವಿಧಾನಾತ್ಮಕ ಇರುವ ಮತದಾನದ ಹಕ್ಕನ್ನು ಅರಿಯಿರಿ- ವಿಶ್ವೇಶ್ವರ ಹೆಗಡೆ ಕಾಗೇರಿ

Date:

ಸಂವಿಧಾನಬದ್ಧವಾಗಿ ಸಿಕ್ಕಿರುವ ಮತದ ಹಕ್ಕನ್ನು ಕಳೆದುಕೊಳ್ಳಬೇಡಿ.

ಅಭ್ಯರ್ಥಿಗಳಲ್ಲಿ ಉತ್ತಮರು ಕಾಣದಿದ್ದರೆ ಈ ಮೇಲಿನ ಯಾರೂ ಅಲ್ಲ ಬಟನ್ ಒತ್ತಿ ಎಂದು ಕರ್ನಾಟಕ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಲಹೆ ನೀಡಿದರು. ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನನ್ನ ಮತ ಯಾವುದೇ ಕಾರಣಕ್ಕೂ ಮಾರಾಟಕ್ಕಿಲ್ಲ ಎಂಬ ಆತ್ಮಸಾಕ್ಷಿಯ ಅಭಿಯಾನ ಕೈಗೊಳ್ಳಿ ಎಂದು ಕರೆ ಕೊಟ್ಟರು.

ಬುಧವಾರ ನಗರದ ಡಾ.ಎಸ್.ಎಂ ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ ಚುನಾವಣೆ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಕಾಗೇರಿ ಮಾತನಾಡಿದರು.

ಚುನಾವಣೆಯಲ್ಲಿಂದು ಹಣ, ತೋಳ್ಬಲ ಹಾಗೂ ಜಾತಿ ಬಲ ಪ್ರಮುಖ ಪಾತ್ರ ವಹಿಸುತ್ತಿವೆ. ಸಂವಿಧಾನಬದ್ಧವಾಗಿ ಸಿಕ್ಕಿರುವ ಮತದ ಹಕ್ಕನ್ನು ಮತದಾರರು ಅರಿಯಬೇಕು. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾರಂಗ ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಮೌಲ್ಯಗಳು ಕುಸಿತವಾಗುತ್ತಿದ್ದು ಭ್ರಷ್ಟಾಚಾರ ವ್ಯಾಪಿಸಿದೆ ಎಂದು ಕಳವಳ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...