Monday, August 10, 2026
Monday, August 10, 2026

ವಿವಿಗಳ ಕೌನ್ಸಿಲ್,ಹಣಕಾಸು ಸಮಿತಿ ,ಸಿಂಡಿಕೇಟ್ ಸಭೆಗಳಿಗೆ ನೇರಪ್ರಸಾರ ಸೌಲಭ್ಯ

Date:

ಮಾಜಿ ಪ್ರಧಾನಮಂತ್ರಿ ದಿವಂಗತ ಎ.ಬಿ. ವಾಜಪೇಯಿ ಅವರ ನೆನಪಿನಲ್ಲಿ ಡಿಸೆಂಬರ್ ತಿಂಗಳನ್ನು ‘ಸುಶಾಸನ ಮಾಸ’ ವನ್ನಾಗಿ ಆಚರಿಸಲಾಗುತ್ತಿದ್ದು, ತಮ್ಮ ವ್ಯಾಪ್ತಿಯ ಇಲಾಖೆಗಳಲ್ಲಿ ಅನೇಕ ಸುಧಾರಣೆಗಳನ್ನು ತರಲಾಗುತ್ತಿದೆ. ಬೆಂಗಳೂರು: ಮಾಜಿ ಪ್ರಧಾನಮಂತ್ರಿ ದಿವಂಗತ ಎ.ಬಿ.ವಾಜಪೇಯಿ ಅವರ ನೆನಪಿನಲ್ಲಿ ಡಿಸೆಂಬರ್ ತಿಂಗಳನ್ನು ‘ಸುಶಾಸನ ಮಾಸ’ ವನ್ನಾಗಿ ಆಚರಿಸಲಾಗುತ್ತಿದ್ದು, ತಮ್ಮ ವ್ಯಾಪ್ತಿಯ ಇಲಾಖೆಗಳಲ್ಲಿ ಅನೇಕ ಸುಧಾರಣೆಗಳನ್ನು ತರಲಾಗುತ್ತಿದೆ. ಅದರ ಒಂದು ಭಾಗವಾಗಿ ವಿಶ್ವವಿದ್ಯಾಲಯಗಳ ಅಕಾಡೆಮಿಕ್ ಕೌನ್ಸಿಲ್, ಹಣಕಾಸು ಸಮಿತಿ, ಸಿಂಡಿಕೇಟ್ ಸಭೆಗಳ ನೇರ ಪ್ರಸಾರಕ್ಕೆ ಚಾಲನೆ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಮಂಗಳವಾರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ವರ್ಷಗಳಲ್ಲಿ ವಾಜಪೇಯಿ ಅವರ ಜನ್ಮದಿನವಾದ ಡಿಸೆಂಬರ್ 25ರಂದು ಸುಶಾಸನ ದಿನ ಆಚರಿಸಲಾಗುತ್ತಿತ್ತು.

ಈ ವರ್ಷ ತಮ್ಮ ಇಲಾಖೆಗಳ ವ್ಯಾಪ್ತಿಯಲ್ಲಿ ಡಿಸೆಂಬರ್ ತಿಂಗಳು ಪೂರ್ತಿ ಸುಶಾಸನ ಮಾಸ’ವನ್ನಾಗಿ ಆಚರಿಸಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ 1ರಂದು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ತಾವು ನಿರ್ವಹಿಸುವ ಉನ್ನತ ಶಿಕ್ಷಣ, ಎಲೆಕ್ಟ್ರಾನಿಕ್ಸ್/ಐಟಿಬಿಟಿ/ವಿಜ್ಞಾನ ಮತ್ತು ತಂತ್ರಜ್ಞಾನ/ ಹಾಗೂ ಕೌಶಲಾಭಿವೃದ್ಧಿ/ಉದ್ಯಮಶೀಲತೆ ಅಥವಾ ಜೀವನೋಪಾಯ ಇಲಾಖೆಗಳಲ್ಲಿ ಇದರ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿಸರ್ಜಿಸಲಾಗಿದೆ, ಅಮಾನತು ಮಾಡಿಲ್ಲ: ಸಚಿವ ಅಶ್ವತ್ಥ್ ನಾರಾಯಣ್ ವಿಶ್ವವಿದ್ಯಾಲಯದ ಆಡಳಿತವನ್ನು ಪಾರದರ್ಶಕವಾಗಿಸುವುದು ಹಾಗೂ ಪರಿಣಾಮಕಾರಿಯಾಗಿಸುವುದು ಸರ್ಕಾರದ ಉದ್ದೇಶ.

ಈ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇವುಗಳಲ್ಲಿ ಅಕಾಡೆಮಿ ಕೌನ್ಸಿಲ್, ಹಣಕಾಸು ಸಮಿತಿ ಹಾಗೂ ಸಿಂಡಿಕೇಟ್ ಸಭೆಗಳ ನೇರ ಪ್ರಸಾರ ವ್ಯವಸ್ಥೆಯೂ ಸೇರಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಈ ನೇರ ಪ್ರಸಾರ ನಡೆಯಲಿದೆ. ಒಮ್ಮೆ ಜಾರಿಗೆ ಬರುತ್ತಿದ್ದಂತೆ ಕಾಯಂ ವ್ಯವಸ್ಥೆಯಾಗಿ ಮುಂದುವರಿಯಲಿದೆ ಎಂದು ವಿವರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...