Monday, February 2, 2026
Monday, February 2, 2026

ವಿವಿಗಳ ಕೌನ್ಸಿಲ್,ಹಣಕಾಸು ಸಮಿತಿ ,ಸಿಂಡಿಕೇಟ್ ಸಭೆಗಳಿಗೆ ನೇರಪ್ರಸಾರ ಸೌಲಭ್ಯ

Date:

ಮಾಜಿ ಪ್ರಧಾನಮಂತ್ರಿ ದಿವಂಗತ ಎ.ಬಿ. ವಾಜಪೇಯಿ ಅವರ ನೆನಪಿನಲ್ಲಿ ಡಿಸೆಂಬರ್ ತಿಂಗಳನ್ನು ‘ಸುಶಾಸನ ಮಾಸ’ ವನ್ನಾಗಿ ಆಚರಿಸಲಾಗುತ್ತಿದ್ದು, ತಮ್ಮ ವ್ಯಾಪ್ತಿಯ ಇಲಾಖೆಗಳಲ್ಲಿ ಅನೇಕ ಸುಧಾರಣೆಗಳನ್ನು ತರಲಾಗುತ್ತಿದೆ. ಬೆಂಗಳೂರು: ಮಾಜಿ ಪ್ರಧಾನಮಂತ್ರಿ ದಿವಂಗತ ಎ.ಬಿ.ವಾಜಪೇಯಿ ಅವರ ನೆನಪಿನಲ್ಲಿ ಡಿಸೆಂಬರ್ ತಿಂಗಳನ್ನು ‘ಸುಶಾಸನ ಮಾಸ’ ವನ್ನಾಗಿ ಆಚರಿಸಲಾಗುತ್ತಿದ್ದು, ತಮ್ಮ ವ್ಯಾಪ್ತಿಯ ಇಲಾಖೆಗಳಲ್ಲಿ ಅನೇಕ ಸುಧಾರಣೆಗಳನ್ನು ತರಲಾಗುತ್ತಿದೆ. ಅದರ ಒಂದು ಭಾಗವಾಗಿ ವಿಶ್ವವಿದ್ಯಾಲಯಗಳ ಅಕಾಡೆಮಿಕ್ ಕೌನ್ಸಿಲ್, ಹಣಕಾಸು ಸಮಿತಿ, ಸಿಂಡಿಕೇಟ್ ಸಭೆಗಳ ನೇರ ಪ್ರಸಾರಕ್ಕೆ ಚಾಲನೆ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಮಂಗಳವಾರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ವರ್ಷಗಳಲ್ಲಿ ವಾಜಪೇಯಿ ಅವರ ಜನ್ಮದಿನವಾದ ಡಿಸೆಂಬರ್ 25ರಂದು ಸುಶಾಸನ ದಿನ ಆಚರಿಸಲಾಗುತ್ತಿತ್ತು.

ಈ ವರ್ಷ ತಮ್ಮ ಇಲಾಖೆಗಳ ವ್ಯಾಪ್ತಿಯಲ್ಲಿ ಡಿಸೆಂಬರ್ ತಿಂಗಳು ಪೂರ್ತಿ ಸುಶಾಸನ ಮಾಸ’ವನ್ನಾಗಿ ಆಚರಿಸಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ 1ರಂದು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ತಾವು ನಿರ್ವಹಿಸುವ ಉನ್ನತ ಶಿಕ್ಷಣ, ಎಲೆಕ್ಟ್ರಾನಿಕ್ಸ್/ಐಟಿಬಿಟಿ/ವಿಜ್ಞಾನ ಮತ್ತು ತಂತ್ರಜ್ಞಾನ/ ಹಾಗೂ ಕೌಶಲಾಭಿವೃದ್ಧಿ/ಉದ್ಯಮಶೀಲತೆ ಅಥವಾ ಜೀವನೋಪಾಯ ಇಲಾಖೆಗಳಲ್ಲಿ ಇದರ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿಸರ್ಜಿಸಲಾಗಿದೆ, ಅಮಾನತು ಮಾಡಿಲ್ಲ: ಸಚಿವ ಅಶ್ವತ್ಥ್ ನಾರಾಯಣ್ ವಿಶ್ವವಿದ್ಯಾಲಯದ ಆಡಳಿತವನ್ನು ಪಾರದರ್ಶಕವಾಗಿಸುವುದು ಹಾಗೂ ಪರಿಣಾಮಕಾರಿಯಾಗಿಸುವುದು ಸರ್ಕಾರದ ಉದ್ದೇಶ.

ಈ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇವುಗಳಲ್ಲಿ ಅಕಾಡೆಮಿ ಕೌನ್ಸಿಲ್, ಹಣಕಾಸು ಸಮಿತಿ ಹಾಗೂ ಸಿಂಡಿಕೇಟ್ ಸಭೆಗಳ ನೇರ ಪ್ರಸಾರ ವ್ಯವಸ್ಥೆಯೂ ಸೇರಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಈ ನೇರ ಪ್ರಸಾರ ನಡೆಯಲಿದೆ. ಒಮ್ಮೆ ಜಾರಿಗೆ ಬರುತ್ತಿದ್ದಂತೆ ಕಾಯಂ ವ್ಯವಸ್ಥೆಯಾಗಿ ಮುಂದುವರಿಯಲಿದೆ ಎಂದು ವಿವರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...