Friday, August 14, 2026
Friday, August 14, 2026

ಏಕರೂಪ ನಾಗರೀಕ ಸಂಹಿತೆ ವಿರೋಧಿಸುತ್ತೇನೆ-ಎಚ್,ಡಿ. ದೇವೇಗೌಡ

Date:

ಏಕರೂಪ ನಾಗರೀಕ ಸಂಹಿತೆ ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರು ವಿರೋಧಿಸಿದ್ದು, ಸಂವಿಧಾನದ ಬದ್ಧವಾಗಿ ನಿಲ್ಲುವುದಾಗಿ ಗುರುವಾರ ಹೇಳಿದ್ದಾರೆ.

ನಂಜನಗೂಡಿನಲ್ಲಿ ಶ್ರೀಕಂಠೇಶ್ವರ ದೇವಾಲಯದಲ್ಲಿ ಕುಟುಂಬದೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಸಿಸಿ ಜಾರಿಗೆ ತರಲು ಸಂವಿಧಾನದಲ್ಲಿ ಅವಕಾಶವಿಲ್ಲ. ಜಾರಿಗೆ ತರಲು ಸರ್ಕಾರ ಯತ್ನಿಸಿದ್ದೇ ಆದರೆ, ತೀವ್ರ ವಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಏಕರೂಪ ನಾಗರಿಕ ಸಂಹಿತೆ ಕುರಿತು ಇತರೆ ರಾಜ್ಯಗಳಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಬಳಿಕ ಮೇಕೆದಾಟು ಯೋಜನೆ ಕುರಿತು ಮಾತನಾಡಿ, ನದಿ ತೀರದ ರಾಜ್ಯವಾದ ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರನ್ನು ಬಳಸಿಕೊಳ್ಳಲು ಸೇಲಂ ಜಿಲ್ಲೆ ಮತ್ತು ಸುತ್ತಮುತ್ತಲಿನ 4 ಲಕ್ಷ ಎಕರೆ ಭೂಮಿಗೆ ನೀರುಣಿಸಲು ಅನುಮತಿಸಲಾಗಿದೆ. ಆದರೆ, ಸಮುದ್ರಕ್ಕೆ ಸೇರುತ್ತಿರುವ ನೀರನ್ನು ಬಳಸಿಕೊಳ್ಳಲು ಕರ್ನಾಟಕಕ್ಕೆ ಅನುಮತಿ ನೀಡುತ್ತಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...