Wednesday, October 2, 2024
Wednesday, October 2, 2024

ಜಾಗತಿಕ ಪರಿಸ್ಥಿತಿ ಪರಿಶೀಲಿಸಿ ಬೃಹತ್ ಪ್ರಮಾಣದ ಆಹಾರ ಸಂಗ್ರಹಣಾ ಯೋಜನೆ

Date:

ದೇಶದ ನಾಗರಿಕರಿಗೆ ಅರ್ಹರಿಗೆ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಜಗತ್ತಿನಲ್ಲಿಯೇ ಅತೀ ಬೃಹತ್‌ ಪ್ರಮಾಣದ ಆಹಾರ ಸಂಗ್ರಹಣ ಯೋಜನೆ ಹಮ್ಮಿಕೊಳ್ಳಲು ಕೇಂದ್ರ ಸರಕಾರ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವಕೃಷಿ ಸಚಿವಾಲಯ, ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಆಹಾರ ಸಂಸ್ಕರಣ ಇಲಾಖೆಗಳ ಯೋಜನೆಗಳನ್ನು ವಿಲೀನಗೊಳಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ಉಕ್ರೇನ್‌ ಮೇಲೆ ರಷ್ಯಾ ನಡೆಸುತ್ತಿರುವ ದಾಳಿ, ಹೆಚ್ಚುತ್ತಿರುವ ಆಹಾರ ಉತ್ಪನ್ನಗಳ ಬೆಲೆ, ರಾಜಕೀಯ ಬೆಳವಣಿಗೆಗಳ ಏರಿಳಿತಗಳನ್ನು ಗಮನಿಸಿರುವ ಕೇಂದ್ರ ಸರಕಾರ ಈ ತೀರ್ಮಾನಕ್ಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಉಕ್ರೇನ್‌ ಮೇಲಿನ ದಾಳಿಯಿಂದಾಗಿದ ಈಗಾಗಲೇ ಆಹಾರ ಪೂರೈಕೆಯ ಸರಪಳಿ ಜಗತ್ತಿನ ಕೆಲವು ಹಂತಗಳಲ್ಲಿ ತಪ್ಪಿ ಹೋಗಿ ಬೆಲೆಯ ಏರಿಕೆಗೆ ಕೂಡ ಕಾರಣವಾಗಿದೆ. ದೇಶದಲ್ಲಿ ಆಹಾರ ಧಾನ್ಯಗಳ ಸಂಗ್ರಹಣೆಗೆ ಸಾಮರ್ಥ್ಯದ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಈ ಹೆಜ್ಜೆಗಳನ್ನು ಇರಿಸಿದೆ ಎಂದು ಕೃಷಿ ಆರ್ಥಿಕ ತಜ್ಞ ಅಶೋಕ್‌ ಗುಲಾಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...