Monday, February 2, 2026
Monday, February 2, 2026

2047 ರ ಹೊತ್ತಿಗೆ ಭಾರತ ವಿಶ್ವಗುರು ಆಗಲಿದೆ- ದ್ರೌಪದಿ ಮುರ್ಮು

Date:

ಭಾರತವು ತನ್ನ ಸ್ವಾತಂತ್ರ್ಯ ಶತಮಾನೋತ್ಸವ ಆಚರಿಸಿಕೊಳ್ಳುವ ಹೊತ್ತಿಗೆ ವಿಶ್ವ ಗುರು ಆಗಲಿದೆ. ಆ ಮೂಲಕ ಪ್ರಾಚೀನ ಭಾರತದ ಗೌರವ ಮರಳಿ ಪಡೆಯಲಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದರು. ವಿಶಾಖಪಟ್ಟಣದ ರಾಮಕೃಷ್ಣ ಬೀಚ್‌ನಲ್ಲಿ ಏರ್ಪಡಿಸಿದ್ದ ನೌಕಾ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾರತವನ್ನು ಶ್ರೇಷ್ಠ ರಾಷ್ಟ್ರ ಎಂದು ಗುರುತಿಸಲಾಗುತ್ತದೆ.

ಯಾಕೆಂದರೆ, ಅಂಥ ಶಕ್ತಿ ಭಾರತದಲ್ಲಿ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ಸಂಗೀತ, ಕ್ರೀಡೆ, ಸಂಸ್ಕೃತಿ, ಸೇನೆ ಸೇರಿದಂತೆ ಎಲ್ಲದರಲ್ಲೂ ಭಾರತೀಯ ಶಕ್ತಿವಂತರಾಗಿದ್ದಾರೆ. ಪ್ರತಿಯೊಬ್ಬರು ಭಾರತವನ್ನು ಅಭಿವೃದ್ಧಿಪಥದಲ್ಲಿ ಕೊಂಡೊಯ್ಯಲು ಕೆಲಸ ಮಾಡುತ್ತಿದ್ದಾರೆ. ಭಾರತವು ತನ್ನ ಸ್ವಾತಂತ್ರ್ಯದ ಶತಮಾನೋತ್ಸವನ್ನು ಆಚರಿಸಿಕೊಳ್ಳುವ ಹೊತ್ತಿಗೆ ವಿಶ್ವ ಗುರುವಾಗಲಿದೆ ಎಂಬ ವಿಶ್ವಾಸವು ನನಗೆ ಇದೆ ಎಂದು ದ್ರೌಪದಿ ಮುರ್ಮು ಅವರು ಹೇಳಿದರು.

ಭಾರತವು ಮೂರು ಕಡೆ ಸಮುದ್ರ ಮತ್ತು ಮತ್ತೊಂದು ಕಡೆ ಎತ್ತರದ ಪ್ರರ್ವತ ಶ್ರೇಣೆಯನ್ನು ಹೊಂದಿದೆ. ಹಾಗಾಗಿ ಇದೊಂದು ಅಂತರ್ಗತವಾಗಿಯೇ ಕಡಲ ರಾಷ್ಟ್ರವಾಗಿದೆ. ದೇಶದ ಬೆಳವಣಿಗೆ ಮತ್ತು ಅಭಿವೃದ್ಧಿಯಲ್ಲಿ ಸಾಗರಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಭಾರತದ ಸಾಗರಗಳ ಗಡಿ ಸುರಕ್ಷತೆಯನ್ನು ಭಾರತೀಯ ನೌಕಾ ಪಡೆ ನಿರ್ವಹಿಸುತ್ತಿದೆ ಎಂದು ಅವರು ಇದೇ ವೇಳೆ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...