Monday, March 30, 2026
Monday, March 30, 2026

ಯುವ ಪ್ರತಿಭೆಗಳ ಅನಾವರಣಕ್ಕೆ ಯುವಜನೋತ್ಸವ ಉತ್ತಮ ವೇದಿಕೆ- ಕೆ.ಎಸ್.ಈಶ್ವರಪ್ಪ

Date:

ಯುವ ಜನತೆಯಲ್ಲಿನ ಪ್ರತಿಭೆ ನಮ್ಮ ಕಲ್ಪನೆಗೂ ಮೀರಿದ್ದಾಗಿದ್ದು, ಇಂತಹ ಪ್ರತಿಭೆಗಳನ್ನು ಅನಾವರಣಗೊಳಿಸಲು ಯುವಜನೋತ್ಸವ ಒಂದು ಉತ್ತಮ ವೇದಿಕೆಯಾಗಿದೆ ಎಂದು ಶಾಸಕರಾದ ಕೆ.ಎಸ್.ಈಶ್ವರಪ್ಪ ನುಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಸರ್ಗ ಮಹಿಳಾ ಮಂಡಳಿ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ, ನಗರ ಪ್ರದೇಶದ ಯುವ ಜನತೆಯ ಪ್ರತಿಭೆ ಅಸಾಮಾನ್ಯವಾಗಿದೆ. ಇಂತಹ ಪ್ರತಿಭೆಯನ್ನು ಹೊರತರಲು ಸರ್ಕಾರ ಯುವಜನೋತ್ಸವದ ವ್ಯವಸ್ಥೆ ಮಾಡಿದೆ. ಶಾಲಾ-ಕಾಲೇಜುಗಳಲ್ಲಿ ಓದಿನ ಕಡೆಗೆ ಹೆಚ್ಚಿನ ಗಮನ ಇರುತ್ತದೆ. ಆದರೆ ಓದಿನೊಂದಿಗೆ ತಮ್ಮಲ್ಲಿರುವ ಪ್ರತಿಭೆಗೂ ಸಹ ಮಹತ್ವ ನೀಡಬೇಕು. ಆದ್ದರಿಂದಲೇ ಸರ್ಕಾರ ಯುವಜನೋತ್ಸವದ ವ್ಯವಸ್ಥೆ ಮಾಡಿದೆ.

ಸಂಗೀತ, ನೃತ್ಯ ಇತ್ಯಾದಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿನ ಪ್ರತಿಭೆಯನ್ನು ಗುರುತಿಸಿ, ಅದರ ಕಲಿಕೆಯಲ್ಲಿ ತೊಡಗಬೇಕು. ಪ್ರಸ್ತುತ ಇವನ್ನೆಲ್ಲ ಕಲಿಸಲು ಅನೇಕ ಶಿಕ್ಷಕರು ಲಭ್ಯವಿದ್ದಾರೆ. ಹಾಗೂ ಪ್ರತಿಭೆಗಳ ಅನಾವರಣಕ್ಕೆ ಅವಕಾಶಗಳಿವೆ. ಅದರ ಸದ್ಬಳಕೆ ಮಾಡಿಕೊಳ್ಳಬೇಕು.

ಕಲೆಯಿಂದ ಕಲಾವಿದರಿಗೆ ಆನಂದ, ಆತ್ಮತೃಪ್ತಿ ಸಿಗುತ್ತದೆ, ಜೊತೆಗೆ ಕಲಾವಿದರು ಸಮಾಜದ ಆಸ್ತಿಯಾಗಿ ಹೊರಹೊಮ್ಮುತ್ತಾರೆ. ಆದ್ದರಿಂದ ಪ್ರತಿಭೆಗಳನ್ನು ಗುರುತಿಸಿ, ಬೆಳೆಸಬೇಕೆಂದು ಕರೆ ನೀಡಿದ ಅವರು ಇಂದಿನ ಸ್ಪರ್ಧೆಯಲ್ಲಿ ಯುವಜನತೆ ಉತ್ತಮವಾಗಿ ಸ್ಪರ್ಧಿಸಿ ಇಲ್ಲಿಂದ ರಾಜ್ಯ ಮಟ್ಟಕ್ಕೆ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಯಶಸ್ವಿಯಾಗಬೇಕೆಂದು ಹಾರೈಸಿದರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಮಾತನಾಡಿ, ಅತಿ ಹೆಚ್ಚು ಸಂಖ್ಯೆಯಲ್ಲಿ ಯುವಜನತೆಯನ್ನು ಹೊಂದಿರುವ ದೇಶ ನಮ್ಮದು. ಯುವ ಭಾರತವು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪ್ರಸ್ತುತ ಮುಂಚೂಣಿಯಲ್ಲಿದೆ.

ಇಲ್ಲಿ ಸ್ಪರ್ಧಿಸಿದ ಯುವಜನತೆ ಉನ್ನತ ಮಟ್ಟದಲ್ಲಿ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರಬೇಕೆಂದು ಆಶಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಇಂದಿನ ಯುವಜನೋತ್ಸವಕ್ಕೆ ಸುಮಾರು 400 ಜನ ಸ್ಪರ್ಧಿಗಳು ನೋಂದಾಯಿಸಿಕೊಂಡಿದ್ದು, ಆಶುಭಾಷಣ, ಏಕಪಾತ್ರಭಿನಯ, ಶಾಸ್ತ್ರೀಯ ನೃತ್ಯ, ಸಂಗೀತ, ವಾದ್ಯ, ಜಾನಪದ ಗೀತಿ, ನೃತ್ಯ ಸೇರಿದಂತೆ
16 ಸ್ಪರ್ಧೆಗಳು ನಡೆಯಲಿವೆ.

ಇಲ್ಲಿ ಪ್ರಥಮ ಸ್ಥಾನ ಪಡೆದಯವರು ನೇರವಾಗಿ ಚಿತ್ರದುರ್ಗಗದಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗುತ್ತಾರೆ. ರಾಜ್ಯ ಮಟ್ಟದಲ್ಲಿ ಆಯ್ಕೆಯಾದವರು ಮಹಾರಾಷ್ಟ್ರದ ಪೂನಾದಲ್ಲಿ ನಡಯುವ ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಪಾಲ್ಗೊಳ್ಳುವರು ಎಂದು ತಿಳಿಸಿದರು.

ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಉಮೇಶ್, ತೀರ್ಪುಗಾರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್

ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು...

Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ

ದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ...

Klive Special Article ಮರೆಯಲಾಗದ ಮಾನವೀಯ ಸಂದೇಶ ಸಾರಿದ ಶ್ರೀಮಹಾವೀರ. ...

Klive Special Article ಜನ ಸಂಸ್ಕೃತಿಗಳು ನಿಂತ ನೀರಾದಾಗಲೆಲ್ಲಾ ಅದನ್ನು...