Wednesday, July 8, 2026
Wednesday, July 8, 2026

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಗಾದಿಗೆ ಬಿರುಸಿನ ಸ್ಪರ್ಧೆ

Date:

ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಪಕ್ಷದ ಅಧ್ಯಕ್ಷರಿಗೆ ಅಧಿಕಾರ ನೀಡುವ ನಿರ್ಣಯವನ್ನು ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರು ಸರ್ವಾನುಮತದಿಂದ ಅಂಗೀಕರಿಸಿದ ನಂತರ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಲಾಬಿ ಮುಂದುವರಿದಿದೆ.

ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಜನಾದೇಶದೊಂದಿಗೆ ಗೆದ್ದ ನಂತರವೂ, ಆರು ಬಾರಿ ಮುಖ್ಯಮಂತ್ರಿಯಾಗಿದ್ದ ವೀರಭದ್ರ ಸಿಂಗ್ ಅವರ ನಿಧನದಿಂದ ಉಂಟಾದ ಶೂನ್ಯವನ್ನು ತುಂಬಲು ಮತ್ತು ಮುಖ್ಯಮಂತ್ರಿ ಆಗುವ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಕುರಿತು ಒಮ್ಮತಕ್ಕೆ ಬರುವುದಕ್ಕೆ ಕಾಂಗ್ರೆಸ್ಗೆ ಕಷ್ಟಕರವಾಗಿದೆ. ರಾಜ್ಯ ಕಾಂಗ್ರೆಸ್ ಮುಖ್ಯಸ್ಥೆ ಪ್ರತಿಭಾ ಸಿಂಗ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಮತ್ತು ಚುನಾವಣಾ ಪ್ರಚಾರ ಸಮಿತಿಯ ಮುಖ್ಯಸ್ಥ ಸುಖ್ವಿಂದರ್ ಸಿಂಗ್ ಸುಖು ಸೇರಿದಂತೆ ಹಲವು ನಾಯಕರು ವೀಕ್ಷಕರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಚರ್ಚಿಸಿದರು.

ಬೆಳಗ್ಗೆಯಿಂದಲೇ ಕಾಂಗ್ರೆಸ್ ಶಾಸಕರು ಪಕ್ಷದ ಕೇಂದ್ರ ವೀಕ್ಷಕರಾದ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರಿರುವ ಶಿಮ್ಲಾದ ಸೆಸಿಲ್ ಹೋಟೆಲ್ ಗೆ ಭೇಟಿ ನೀಡಿದರು.

66 ವರ್ಷದ ಪ್ರತಿಭಾ ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಸ್ಪರ್ಧಿಸುದರ ಬಗ್ಗೆ ಸೂಚಿಸಿದ್ದು, ಇದನ್ನು ಅವರ ಪುತ್ರ ಕೂಡ ಸ್ಫಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸುಖು, ‘ನಾನು ಮುಖ್ಯಮಂತ್ರಿ ಆಕಾಂಕ್ಷಿಯಲ್ಲ, ನಾನು ಕೇವಲ ಕಾಂಗ್ರೆಸ್ ಕಾರ್ಯಕರ್ತೆ ಮತ್ತು ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುತ್ತೇನೆ’ ಎಂದು ಹೇಳಿದ್ದರು.

ರಾಜ್ಯಪಾಲರಿಗೆ ಪಕ್ಷದ ಚುನಾಯಿತ ಶಾಸಕರ ಪಟ್ಟಿ ಸಲ್ಲಿಸಿದ ನಿಯೋಗವು, ಸರ್ಕಾರ ರಚನೆಗೆ ಕಾಲಾವಕಾಶ ಕೋರಿದೆ. 68 ವಿಧಾನಸಭಾ ಕ್ಷೇತ್ರಗಳ ಪೈಕಿ 40 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್, ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...