Friday, May 15, 2026
Friday, May 15, 2026

ಸಲಾಂ ಆರತಿ ಹೆಸರು ಬದಲಾಗುತ್ತಿದೆ ಅಷ್ಟೆ- ಸಚಿವೆ ಶಶಿಕಲಾ ಜೊಲ್ಲೆ

Date:

ರಾಜ್ಯದ ಯಾವುದೇ ದೇವಾಲಯಗಳಲ್ಲಿ ಆರತಿ ಪದ್ಧತಿ ರದ್ದಾಗಿಲ್ಲ. ಸಲಾಂ ಆರತಿ ಹೆಸರಿನಲ್ಲಿ ಬದಲಾವಣೆ ಮಾಡಲಾಗುತ್ತಿದೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ಧಾರ್ಮಿಕ ಪರಿಷತ್ ಗೂ ಕೆಲ ಅಧಿಕಾರಗಳು ಇವೆ. ಸಲಾಂ ಎಂಬುದು ಸಂಸ್ಕೃತ ಪದವಲ್ಲ ಹಾಗಾಗಿ ಸಲಾಂ ಜಾಗದಲ್ಲಿ ಬೇರೊಂದು ಸಂಸ್ಕೃತ ಹೆಸರಿರಬೇಕು ಎಂದು ಹೇಳಿದೆ. ಧಾರ್ಮಿಕ ಪರಿಷತ್ ಮನವಿಗೆ ಸ್ಪಂದಿಸಿದ್ದೇವೆ. ಆದರೆ ಈ ಬಗ್ಗೆ ಅಂತಿಮವಾಗಿ ತೀರ್ಮಾನ ಮಾಡಿಲ್ಲ ಎಂದರು.
ಅಧಿಕಾರಿಗಳು, ಇತಿಹಾಸಕಾರರ ಜೊತೆ ಸಮಾಲೋಚಿಸಿ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಸರ್ಕಾರದ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಸಲಾಂ ಆರತಿ ಬದಲಿಗೆ ಆರತಿ ನಮಸ್ಕಾರ, ದೀವಟಿಗೆ ಸಲಾಂ ಬದಲಿಗೆ ಮಂಗಳಾರತಿ ನಮಸ್ಕಾರ ಎಂದು ಬದಲಿಸಲು ಚಿಂತನೆ ನಡೆದಿದೆ ಎಂದರು.

ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿನ ದೇವಾಲಯಗಳಲ್ಲಿ ನಡೆಯುತ್ತಿದ್ದ ಸಲಾಂ ಮಂಗಳಾರತಿ ಎಂಬ ಹೆಸರನ್ನು ಬದಲಾವಣೆ ಮಾಡಬೇಕು ಎಂದು ಧಾರ್ಮಿಕ ಪರಿಷತ್ ಮನವಿ ಮಾಡಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shivamogga ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವುದು ಮನುಷ್ಯರ ಜವಾಬ್ದಾರಿ- ಬಿ.ಜಿ.ಶಿವಮೂರ್ತಿ

Rotary Club Shivamogga ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸುವುದು...

Bhadra dam ಮೇ17 ರ ಮಧ್ಯರಾತ್ರಿಯಿಂದ ಭದ್ರಾ ಬಲ ಮತ್ತು ಎಡದಂಡೆ ಕಾಲುವೆಗಳ ಮೂಲಕ ಹರಿಯುತ್ತಿರುವ ನೀರು ಬಂದ್

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ...

Royal Diamond English Medium School ಮನೆಯೇ ಮೊದಲ ಪಾಠಶಾಲೆ.ತಾಯಿಯೇ ಮೊದಲ ಗುರು- ವೀಣಾ ನಾಯಕ್

Royal Diamond English Medium School ಸಿರಿಗನ್ನಡ ವೇದಿಕೆ, ಮಹಿಳಾ...

Priyanka Kharge ಗ್ರಾಮ ಪಂಚಾಯತ್ ಗಳು ರಾಷ್ಡ್ರಮಟ್ಟದಲ್ಲಿ ಗಮನ ಸೆಳೆದು ಪ್ರಶಸ್ತಿಗೆ ಭಾಜನ: ಸಶಕ್ತೀಕರಣಕ್ಕೆ ಹಿಡಿದ ಕನ್ನಡಿ- ಸಚಿವ ಪ್ರಿಯಾಂಕ ಖರ್ಗೆ

Priyanka Kharge ಕೇಂದ್ರ ಸರ್ಕಾರದಿಂದ ಕೊಡಮಾಡುವ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಕರ್ನಾಟಕದ...