Friday, May 15, 2026
Friday, May 15, 2026

ನಿತ್ಯ ಮನಕ್ಕೆ ಮುದ ನೀಡುವ ಚಟುವಟಿಕೆ ಮಾಡಿ-ಡಾ.ಸರ್ಜಿ

Date:

ವಯಸ್ಸು ದೇಹಕ್ಕಲ್ಲ, ಮನಸ್ಸಿಗೆ ಮಾತ್ರ, ಹಾಗಾಗಿ ನಿತ್ಯ ಮನಸ್ಸಿಗೆ ಮುದ ನೀಡುವ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಮೂಲಕ ದೇಹಾರೋಗ್ಯವನ್ನು ಕಾಪಾಡಿಕೊಳ್ಳುವಂತೆ ನಿವೃತ್ತ ನೌಕರರಿಗೆ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ ಸಲಹೆ ನೀಡಿದರು.

ಸರ್ಜಿ ಫೌಂಡೇಶನ್‌, ಸರ್ಜಿ ಆಸ್ಪತ್ರೆಗಳ ಸಮೂಹ ಹಾಗೂ ಜಿಲ್ಲಾ ಸರಕಾರಿ ನಿವೃತ್ತ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ನಿವೃತ್ತ ನೌಕರರಿಗೆ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಸರಕಾರದ ನಿಯಮಾನುಸಾರ ಸರಕಾರಿ ಸೇವೆಯಲ್ಲಿ 60 ರ ನಂತರ ನಿವೃತ್ತಿಯಷ್ಟೇ. ನಿವೃತ್ತಿ ಅನ್ನುವುದು ದೇಹಕ್ಕೆ ಸಂಬಂಧಿಸಿದ್ದೇ ಹೊರತು ಮನಸ್ಸಿಗಲ್ಲ. ಮನೆಯಲ್ಲಿಯೇ ನಿತ್ಯವೂ ಸಣ್ಣಪುಟ್ಟ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಮೂಲಕ ಬೇಸರ ಕಳೆದುಕೊಳ್ಳಬಹುದು, ಗಾರ್ಡನ್‌ನಲ್ಲಿ ಒಂದಷ್ಟು ಕೆಲಸ, ಪುಸ್ತಕ ಓದುವುದು, ಇಲ್ಲವೇ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಕೊಳ್ಳುವುದು, ನಿಮಗೆ ವೃತ್ತಿ ಜೀವನದಲ್ಲಿದ್ದ ಅನುಭವವನ್ನು ಯುವ ಸಮೂಹಕ್ಕೆ , ಸಮಾಜಕ್ಕೆ ಧಾರೆ ಎರೆಯುವಂತಹ ಕೆಲಸ, ಕಾರ್ಯಗಳಲ್ಲಿ ತೊಡಗಿಕೊಂಡರೆ ಆರೋಗ್ಯ ಸದೃಢವಾಗಿರುತ್ತದೆ, ನೆಮ್ಮದಿಯೂ ಲಭಿಸುತ್ತದೆ ಎಂದರು.

ವರನಟ ಡಾ.ರಾಜ್‌ ಕುಮಾರ್‌ ಅವರು ತಮ 45 ನೇ ವಯಸ್ಸಿನಲ್ಲಿ ಹಾಡುಗಾರಿಕೆಯನ್ನು ಆರಂಭಿಸಿ, ಬಹುದೊಡ್ಡ ಸಾಧನೆ ಮಾಡುವ ಮೂಲಕ ಇಂದಿಗೂ ಚಿತ್ರ ರಸಿಕರ, ಸಂಗೀತ ಪ್ರಿಯರ ಜನಮಾನಸದಲ್ಲಿ ಉಳಿದಿದ್ದಾರೆ, ಈ ವಯಸ್ಸಿನಲ್ಲಿ ಹಾಡೋದು ಸಾಧ್ಯಾನಾ ಎಂದುಕೊಂಡಿದ್ದರೆ ಅದು ಸಾಧ್ಯವಿರುತ್ತಿರಲ್ಲ, ಹಾಗೆಯೇ ವಿಶ್ವದ ಶ್ರೇಷ್ಠ ವಿಜ್ಞಾನಿ, ಬಲ್ಬ್ ಅನ್ನು ಕಂಡು ಹಿಡಿದ ಥಾಮಸ್‌ ಆಲ್ವಾ ಎಡಿಸನ್‌ ಅವರು ಕೂಡ, 64 ನೇ ವಯಸ್ಸಿನಲ್ಲಿ ತಮ್ಮ ಕಾರ್ಖಾನೆಗಳೆಲ್ಲವೂ ಬೆಂಕಿಗಾಹುತಿಯಾದಾಗ ಧೃತಿಗೆಡದೇ ಮತ್ತೆ ಕಾರ್ಖಾನೆಗಳನ್ನು ನಿರ್ಮಿಸುತ್ತಾರೆ. ನಿವೃತ್ತಿಯ ವಯಸ್ಸಾಗಿದೆ ಎಂದು ಸುಮ್ಮನೆ ಕುಳಿತಿದ್ದರೆ ಅದು ಸಾಧ್ಯವಾಗುತ್ತಿರಲಿಲ್ಲ. ಹಾಗಾಗಿ ನಿವೃತ್ತಿಯ ನಂತರ ಮಾನಸಿಕ ಸದೃಢರಾದರೆ ಮಾತ್ರ ನೆಮ್ಮದಿ ಜೀವನ ಕಾಣಲು ಸಾಧ್ಯ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಯುವ ಮುಖಂಡ , ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್‌ ಮಾತನಾಡಿ, ಡಾ.ಧನಂಜಯ ಸರ್ಜಿ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಅವರಿಗೆ ಹೃದಯಪೂರ್ವಕ ಸ್ವಾಗತ. ಅವರ ಅನುಭವವನ್ನು ಪಕ್ಷ ಬಳಸಿಕೊಳ್ಳಲಿದ್ದು, ಎಲ್ಲರೂ ಸಂಘಟಿತರಾಗಿ, ಒಟ್ಟಿಗೆ ಬೆಳೆಯೋಣ ಎಂದು ಆಶಿಸಿದರು.

ಈ ಸಂದರ್ಭ ಡಾ.ಧನಂಜಯ ಸರ್ಜಿ ಅವರನ್ನು ಗೌರವಿಸಲಾಯಿತು.
ಜಿಲ್ಲಾ ಸರಕಾರಿ ನಿವೃತ್ತ ನೌಕರರ ಸಂಘದ ಡಿ.ಎಂ.ಚಂದ್ರಶೇಖರ್‌ ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shivamogga ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವುದು ಮನುಷ್ಯರ ಜವಾಬ್ದಾರಿ- ಬಿ.ಜಿ.ಶಿವಮೂರ್ತಿ

Rotary Club Shivamogga ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸುವುದು...

Bhadra dam ಮೇ17 ರ ಮಧ್ಯರಾತ್ರಿಯಿಂದ ಭದ್ರಾ ಬಲ ಮತ್ತು ಎಡದಂಡೆ ಕಾಲುವೆಗಳ ಮೂಲಕ ಹರಿಯುತ್ತಿರುವ ನೀರು ಬಂದ್

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ...

Royal Diamond English Medium School ಮನೆಯೇ ಮೊದಲ ಪಾಠಶಾಲೆ.ತಾಯಿಯೇ ಮೊದಲ ಗುರು- ವೀಣಾ ನಾಯಕ್

Royal Diamond English Medium School ಸಿರಿಗನ್ನಡ ವೇದಿಕೆ, ಮಹಿಳಾ...

Priyanka Kharge ಗ್ರಾಮ ಪಂಚಾಯತ್ ಗಳು ರಾಷ್ಡ್ರಮಟ್ಟದಲ್ಲಿ ಗಮನ ಸೆಳೆದು ಪ್ರಶಸ್ತಿಗೆ ಭಾಜನ: ಸಶಕ್ತೀಕರಣಕ್ಕೆ ಹಿಡಿದ ಕನ್ನಡಿ- ಸಚಿವ ಪ್ರಿಯಾಂಕ ಖರ್ಗೆ

Priyanka Kharge ಕೇಂದ್ರ ಸರ್ಕಾರದಿಂದ ಕೊಡಮಾಡುವ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಕರ್ನಾಟಕದ...