Monday, February 9, 2026
Monday, February 9, 2026

ನೇಮಕಾತಿ ಪ್ರಕ್ರಿಯೆ ಲೋಪದೋಷಗಳಿಗೆ ಕಡಿವಾಣ- ಬೊಮ್ಮಾಯಿ

Date:

ತಂತ್ರಜ್ಞಾನದ ಮೂಲಕ ಇತ್ತೀಚಿನ ದಿನಗಳಲ್ಲಿ ಅಪರಾಧ ಕೂಡ ಹೆಚ್ಚಾಗುತ್ತಿದೆ. ಅದೇ ತಂತ್ರಜ್ಞಾನ ಅಪರಾಧವನ್ನು ಪತ್ತೆಹಚ್ಚಲು ಅನುಕೂಲವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ರಾಜಭವನದ ಗಾಜಿನ ಅರಮನೆಯಲ್ಲಿ ನಡೆದ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಇತ್ತೀಚೆಗೆ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಇಲಾಖೆಯ ನೇಮಕಾತಿ ವೇಳೆ ನಡೆಯುವ ಅಕ್ರಮಗಳನ್ನು ತಡೆಗಟ್ಟಲು ಮುಂದಾಗಬೇಕೆಂದು ಸಿಎಂ ಸೂಚನೆ ನೀಡಿದರು.

ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ವೇಳೆ ಒಂದಿಲ್ಲೊಂದು ಎಡವಟ್ಟುಗಳಿಂದಾಗಿ ಅಕ್ರಮಗಳು ನಡೆದಿರುವುದು ಇಲಾಖೆಗೆ ಶೋಭೆ ತರುವುದಿಲ್ಲ ಎಂದು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.
ಗೃಹ ಇಲಾಖೆಗೆ ಇನ್ನು ಹೆಚ್ಚಿನ ತಂತ್ರಜ್ಞಾನ ಅಗತ್ಯವಿದೆ ಎಂಬುದು ನನಗೆ ಗೊತ್ತಾಗಿದೆ. ನಿಮಗೆ ಬೇಕಾದ ಪರಿಣಿತರನ್ನು ಸೇರಿಸಿಕೊಳ್ಳಿ. ಅದಕ್ಕೆ ಬೇಕಾದ ಅನುದಾನವನ್ನು ಮುಂದಿನ ಬಜೆಟ್‍ನಲ್ಲಿ ನೀಡುತ್ತೇನೆ ಎಂದು ಭರವಸೆ ನೀಡಿದರು.

ವಿಧಿವಿಜ್ಞಾನ ಪ್ರಯೋಗಾಲಯ ಸದ್ಯಕ್ಕೆ ಬೆಂಗಳೂರು, ಹುಬ್ಬಳ್ಳಿ ಮತ್ತು ಬಳ್ಳಾರಿಯಲ್ಲಿ ಮಾತ್ರ ಕಾರ್ಯ ನಿರ್ವಹಿಸುತ್ತಿದೆ. ಇದು ಕನಿಷ್ಟ ಪಕ್ಷ ವಲಯದಲ್ಲಾದರೂ ಇರಬೇಕೆಂದು ಅಧಿಕಾರಿಗಳು ನನಗೆ ಸಲಹೆ ನೀಡಿದ್ದಾರೆ. ಎರಡು ವಿಧಿವಿಜ್ಞಾನ ಪ್ರಯೋಗಾಲಯ ತೆರೆಯಲು ಸರ್ಕಾರ ಸಿದ್ದವಿದೆ ಎಂದು ತಿಳಿಸಿದರು.

ಈಗ ತಂತ್ರಜ್ಞಾನ ಸಾಕಷ್ಟು ಮುಂದುವರೆದಿದೆ. ಎಂತಹ ಅಪರಾಧವಿರಲಿ, ಅಕ್ರಮವೇ ಇರಲಿ ಕಾಲಮಿತಿ ಯೊಳಗೆ ಪತ್ತೆಹಚ್ಚಬಹುದು. ಈ ತಂತ್ರಜ್ಞಾನವನ್ನು ಅಳವಡಿಸಿಕೊಂಡು ನೇಮಕಾತಿಯಲ್ಲಿ ಉಂಟಾಗುವ ಲೋಪದೋಷಗಳಿಗೆ ಕಡಿವಾಣ ಹಾಕಬೇಕು, ಅಧಿಕಾರಿಗಳು ಗಂಭೀರ ಚಿಂತನೆ ನಡೆಸಬೇಕೆಂದು ಸಲಹೆ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜೈಲಿನಿಂದ ಬಿಡುಗಡೆಯಾದ ರೌಡಿ ಶೀಟರ್ ಕಾಲಿಗೆ ಗುಂಡು

Breaking News ಶಿವಮೊಗ್ಗಜಿಲ್ಲೆಯ ಭದ್ರಾವತಿ ತಾಲೂಕಿನ ಶಿವಾನಿ ಕ್ರಾಸ್ ಬಳಿ ರೌಡಿ...

Shimoga News ಯಶಸ್ವಿ ಅಂಡಮಾನ್ ಪ್ರವಾಸ ಪೂರೈಸಿದ ಪ್ರವಾಸಿಗರ ” ಸ್ನೇಹ ಮಿಲನ” ಕಾರ್ಯಕ್ರಮ

Shimoga News ಇತ್ತೀಚೆಗೆ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ,ಯೂತ್...

Siddaramaiah ಎಂಎಸ್ಐಎಲ್ ವತಿಯಿಂದ ಚಿಟ್ಸ್ ಮತ್ತು ಸಾಫ್ಟ್ ವೇರ್ ,ಮೊಬೈಲ್ ಆ್ಯಪ್ ಬಿಡುಗಡೆ.

Siddaramaiah ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ವತಿಯಿಂದ ವಿಧಾನಸೌಧದ ಬ್ಯಾಕ್ವಿಂಟ್...

Shimoga Bharat Scouts and Guides ಶಿಬಿರಗಳು ಮಕ್ಕಳ ನಡುವೆ ಉತ್ತಮ ಬಾಂಧವ್ಯ ರೂಪಿಸುತ್ತವೆ- ಶಕುಂತಲಾ ಚಂದ್ರಶೇಖರ್

Shimoga Bharat Scouts and Guides ಮಕ್ಕಳಲ್ಲಿನ ಸುಪ್ತ ಪ್ರತಿಭೆಗಳನ್ನು ಹೊರ...