Wednesday, July 8, 2026
Wednesday, July 8, 2026

ಲಾರಿ ಕಾರು ಢಿಕ್ಕಿ: ಮೂವರು ವಿದ್ಯಾರ್ಥಿಗಳ ಮರಣ

Date:

ಶಿವಮೊಗ್ಗ ತಾಲೂಕು ಕಲ್ಲಾಪುರ ಗ್ರಾಮದಲ್ಲಿ ಭೀಕರ ಅಪಘಾತ ನಡೆದಿದೆ. ನಿನ್ನೆ ಡಿಸೆಂಬರ್ 11ರ ಭಾನುವಾರ ಬೆಳಗ್ಗೆ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದ ಮೂವರು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮೃತಪಟ್ಟ ವಿದ್ಯಾರ್ಥಿಗಳು ದಾವಣಗೆರೆಯ ಅವರಗೆರೆ ನಿವಾಸಿಗಳು ಎಂದು ತಿಳಿದುಬಂದಿದೆ. 21 ವರ್ಷದ ವಯೋಮಾನದವರಾದ ವಿವೇಕ್, ಕಾರ್ತಿಕ್, ಮೋಹನ್ ಮೃತಪಟ್ಟ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ದಾವಣಗೆರೆ ನಗರ ಬಡಾವಣೆ ನಿವಾಸಿ ರುದ್ರೇಶ್ ಪೊಟೀಲ್ (20) ಗಂಭೀರ ಗಾಯಗೊಂಡ ಯುವಕನನ್ನು ಶಿವಮೊಗ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿಗಳು ಶಿವಮೊಗ್ಗದಿಂದ ದಾವಣಗೆರೆಗೆ ಕಾರಿನಲ್ಲಿ ತೆರಳುತ್ತಿದ್ದರು. ಎದುರುಗಡೆಯಿಂದ ಮೆಕ್ಕೆಜೋಳ ತುಂಬಿಕೊಂಡ ಲಾರಿ ಏಕಾಏಕಿ ಡಿಕ್ಕಿ ಹೊಡಿದಿದೆ. ಇದರಿಂದ ಕಾರಿನ ಮುಂಭಾಗ ಜಜ್ಜಿ ಹೋಗಿದೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಮಾಹಿತಿ ದೊರೆತಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಆಗಮಿಸಿ, ಘಟನೆಯ ಬಗ್ಗೆ ತನಿಖೆಯನ್ನು ನಡೆಸುತ್ತಿದ್ದಾರೆ. ಈ ಸಂಬಂಧ ಶಿವಮೊಗ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...