Sunday, December 7, 2025
Sunday, December 7, 2025

ಗುಣಮಟ್ಟದ ಶಿಕ್ಷಣಕ್ಕೆ ವಿಐಎಸ್ಎಲ್ ನಿಂದ ನಿರಂತರ ಪ್ರೋತ್ಸಾಹ- ಚಂದ್ವಾನಿ

Date:

ಶಾಲೆಗಳಿಗೆ ಉಪಯುಕ್ತವಾದ ಅಂದಾಜು ಎರಡು ಲಕ್ಷ ರೂ ಮೌಲ್ಯದ ಬೆಂಚು, ಡೆಸ್ಕ್, ಟೇಬಲ್‌ಗಳು, ಕುರ್ಚಿಗಳು ಮತ್ತು ಅಕ್ಷರದಾಸೋಹ ಯೋಜನೆಗೆ ಬಳಸಬಹುದಾದ ಪಾತ್ರೆಗಳಂತಹ ಶೈಕ್ಷಣ ಕ ವಸ್ತುಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ನಾಗೇಂದ್ರಪ್ಪರವರಿಗೆ ವಿಐಎಸ್‌ಎಲ್ ನ ಕಾರ್ಯಪಾಲಕ ನಿರ್ದೇಶಕ ಶ್ರೀ ಬಿ.ಎಲ್. ಚಂದ್ವಾನಿ ರವರು ಸೈಲ್-ವಿಐಎಸ್‌ಎಲ್‌ನ ಮಾನವ ಸಂಪನ್ಮೂಲ ಕೇಂದ್ರದಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಯಪಾಲಕ ನಿರ್ದೇಶಕರು, ವಿದ್ಯಾರ್ಥಿಗಳಿಗೆ ಲಭ್ಯವಿರುವ ಮೂಲಸೌಕರ್ಯಗಳನ್ನು ಸುಧಾರಿಸಲು ಮತ್ತು ಗುಣಮಟ್ಟದ ಶಿಕ್ಷಣವನ್ನು ನೀಡಲು ಸೈಲ್-ವಿಐಎಸ್‌ಎಲ್ ಸಂಸ್ಥೆಯು ನಿರಂತರವಾಗಿ ಶ್ರಮಿಸುತ್ತದೆ ಎಂದು ತಿಳಿಸಿದರು.

ಶ್ರೀ ನಾಗೇಂದ್ರಪ್ಪರವರು ಸೈಲ್-ವಿಐಎಸ್‌ಎಲ್ ಆಡಳಿತಕ್ಕೆ ಧನ್ಯವಾದಗಳನ್ನು ಅರ್ಪಿಸಿದರು ಮತ್ತು ವಿದ್ಯಾರ್ಥಿಗಳ ಮೂಲಸೌಕರ್ಯ ಸೌಲಭ್ಯಗಳ ಸುಧಾರಣೆಗೆ ಸಾಮಗ್ರಿಗಳನ್ನು ಸೂಕ್ತವಾಗಿ ಬಳಸಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿಐಎಸ್‌ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಶ್ರೀ ಜೆ. ಜಗದೀಶ, ವಿಐಎಸ್‌ಎಲ್ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಅಜಯ್.ಡಿ.ಸೋಂಕುವಾರ್, ಹಿರಿಯ ಅಧಿಕಾರಿಗಳಾದ ಶ್ರೀಮತಿ ಶೋಭ ಶಿವಶಂಕರನ್, ಮಹಾ ಪ್ರಬಂಧಕರು (ಹಣಕಾಸು ಮತ್ತು ಲೆಖ್ಖ), ಶ್ರೀ ಎನ್.ಕೆ. ಶಶಿಧರ್, ಮಹಾಪ್ರಬಂಧಕರು (ಎಮ್.ಎಮ್ ಮತ್ತು ಸಿ.ಸಿ) ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಿಬ್ಬಂದಿ ಇಲಾಖೆಯಿಂದ ಆಯೋಜಿಸಲಾಗಿತ್ತು. ಶ್ರೀಮತಿ ಶೋಭ.ಕೆ.ಎಸ್, ಸಹಾಯಕ ವ್ಯವಸ್ಥಾಪಕರು (ಸಿಬ್ಬಂದಿ) ನಿರೂಪಿಸಿದರು. ಶ್ರೀ ಎಲ್. ಪ್ರವೀಣ್ ಕುಮಾರ್, ಮಹಾ ಪ್ರಬಂಧಕರು (ಸಿಬ್ಬಂದಿ ಮತ್ತು ಸಾರ್ವಜನಿಕ ಸಂಪರ್ಕ) ಸ್ವಾಗತಿಸಿ ಧನ್ಯವಾಗಳನ್ನು ಅರ್ಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...