Thursday, February 5, 2026
Thursday, February 5, 2026

ಗುಣಮಟ್ಟದ ಶಿಕ್ಷಣಕ್ಕೆ ವಿಐಎಸ್ಎಲ್ ನಿಂದ ನಿರಂತರ ಪ್ರೋತ್ಸಾಹ- ಚಂದ್ವಾನಿ

Date:

ಶಾಲೆಗಳಿಗೆ ಉಪಯುಕ್ತವಾದ ಅಂದಾಜು ಎರಡು ಲಕ್ಷ ರೂ ಮೌಲ್ಯದ ಬೆಂಚು, ಡೆಸ್ಕ್, ಟೇಬಲ್‌ಗಳು, ಕುರ್ಚಿಗಳು ಮತ್ತು ಅಕ್ಷರದಾಸೋಹ ಯೋಜನೆಗೆ ಬಳಸಬಹುದಾದ ಪಾತ್ರೆಗಳಂತಹ ಶೈಕ್ಷಣ ಕ ವಸ್ತುಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ನಾಗೇಂದ್ರಪ್ಪರವರಿಗೆ ವಿಐಎಸ್‌ಎಲ್ ನ ಕಾರ್ಯಪಾಲಕ ನಿರ್ದೇಶಕ ಶ್ರೀ ಬಿ.ಎಲ್. ಚಂದ್ವಾನಿ ರವರು ಸೈಲ್-ವಿಐಎಸ್‌ಎಲ್‌ನ ಮಾನವ ಸಂಪನ್ಮೂಲ ಕೇಂದ್ರದಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಯಪಾಲಕ ನಿರ್ದೇಶಕರು, ವಿದ್ಯಾರ್ಥಿಗಳಿಗೆ ಲಭ್ಯವಿರುವ ಮೂಲಸೌಕರ್ಯಗಳನ್ನು ಸುಧಾರಿಸಲು ಮತ್ತು ಗುಣಮಟ್ಟದ ಶಿಕ್ಷಣವನ್ನು ನೀಡಲು ಸೈಲ್-ವಿಐಎಸ್‌ಎಲ್ ಸಂಸ್ಥೆಯು ನಿರಂತರವಾಗಿ ಶ್ರಮಿಸುತ್ತದೆ ಎಂದು ತಿಳಿಸಿದರು.

ಶ್ರೀ ನಾಗೇಂದ್ರಪ್ಪರವರು ಸೈಲ್-ವಿಐಎಸ್‌ಎಲ್ ಆಡಳಿತಕ್ಕೆ ಧನ್ಯವಾದಗಳನ್ನು ಅರ್ಪಿಸಿದರು ಮತ್ತು ವಿದ್ಯಾರ್ಥಿಗಳ ಮೂಲಸೌಕರ್ಯ ಸೌಲಭ್ಯಗಳ ಸುಧಾರಣೆಗೆ ಸಾಮಗ್ರಿಗಳನ್ನು ಸೂಕ್ತವಾಗಿ ಬಳಸಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿಐಎಸ್‌ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಶ್ರೀ ಜೆ. ಜಗದೀಶ, ವಿಐಎಸ್‌ಎಲ್ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಅಜಯ್.ಡಿ.ಸೋಂಕುವಾರ್, ಹಿರಿಯ ಅಧಿಕಾರಿಗಳಾದ ಶ್ರೀಮತಿ ಶೋಭ ಶಿವಶಂಕರನ್, ಮಹಾ ಪ್ರಬಂಧಕರು (ಹಣಕಾಸು ಮತ್ತು ಲೆಖ್ಖ), ಶ್ರೀ ಎನ್.ಕೆ. ಶಶಿಧರ್, ಮಹಾಪ್ರಬಂಧಕರು (ಎಮ್.ಎಮ್ ಮತ್ತು ಸಿ.ಸಿ) ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಿಬ್ಬಂದಿ ಇಲಾಖೆಯಿಂದ ಆಯೋಜಿಸಲಾಗಿತ್ತು. ಶ್ರೀಮತಿ ಶೋಭ.ಕೆ.ಎಸ್, ಸಹಾಯಕ ವ್ಯವಸ್ಥಾಪಕರು (ಸಿಬ್ಬಂದಿ) ನಿರೂಪಿಸಿದರು. ಶ್ರೀ ಎಲ್. ಪ್ರವೀಣ್ ಕುಮಾರ್, ಮಹಾ ಪ್ರಬಂಧಕರು (ಸಿಬ್ಬಂದಿ ಮತ್ತು ಸಾರ್ವಜನಿಕ ಸಂಪರ್ಕ) ಸ್ವಾಗತಿಸಿ ಧನ್ಯವಾಗಳನ್ನು ಅರ್ಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...