Thursday, March 19, 2026
Thursday, March 19, 2026

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕುಗ್ರಾಮ ವಾಸ್ತವ್ಯ

Date:

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ ಬಂದಾಗಿನಿಂದಲೂ ನೂತನ ಕಾರ್ಯಕ್ರಮಗಳಿಗೆ ನಾಂದಿ ಹಾಡಿದ್ದು, ಇದರ ಮುಂದುವರಿದ ಭಾಗವಾಗಿ ಜಿಲ್ಲೆಯಲ್ಲಿರುವ ಕುಗ್ರಾಮಗಳನ್ನು ಗುರುತಿಸಿ ಅಲ್ಲಿ ಗ್ರಾಮ ವಾಸ್ತವ್ಯವನ್ನು ಮಾಡುವ ಮೂಲಕ ಅಲ್ಲಿಯ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸುವ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಗೋಪಾಲ್ ಎಸ್.ಯಡಗೆರೆ ಹೇಳಿದರು.

ಇಲ್ಲಿನ ಪ್ರೆಸ್‌ಟ್ರಸ್ಟ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ನಡೆ ಸಮಾಜ ಕಡೆ ಘೋಷಣೆಯಡಿ ಸಂಗವು ಈ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಜ್ಲಿಲೆಯ ಅತ್ಯಂತ ಹಿಂದುಳಿದ ಗ್ರಾಮಗಳನ್ನು ಸಾರ್ವಜನಿಕರು, ವಿವಿಧ ಸಂಘಟನೆಗಳು, ಸಂಘ-ಸಂಸ್ಥೆಗಳು ತಿಳಿಸಿದರೆ, ಆ ಎಲ್ಲ ಗ್ರಾಮಗಳಿಗೆ ಪತ್ರಕರ್ತರ ತಂಡ ಭೇಟಿ ನೀಡಿ ಮೂರು ಗ್ರಾಮಗಳನ್ನು ಅಂತಿಮಗೊಳಿಸಲಾಗುವುದು. ಆ ಮೂರು ಕುಗ್ರಾಮಗಳಲ್ಲಿ ಪತ್ರಕರ್ತರು ಒಂದು ದಿನ ವಾಸ್ತವ್ಯ ಹೂಡಿ ಅಲ್ಲಿನ ಸಮಸ್ಯೆಗಳನ್ನು ಸುದ್ದಿರೂಪದಲ್ಲಿ ಪ್ರಕಟಿಸಲಾಗುವುದು. ಪ್ರಕಟಗೊಂಡ ಎಲ್ಲ ವರದಿಗಳನ್ನು ಕ್ರೋಢಿಕರಿಸಿ ಅಂತಿಮ ವರದಿಯನ್ನು ಸಿದ್ದಗೊಳಿಸಿ ಆಯಾ ಗ್ರಾಮದ ವ್ಯಾಪ್ತಿಯ ಶಾಸಕರು, ಜಿಲ್ಲಾಡಳಿತ, ಉಸ್ತುವಾರಿ ಸಚಿವರು ಹಾಗೂ ಸರ್ಕಾರಕ್ಕೆ ಗ್ರಾಮದ ಅಭಿವೃದ್ಧಿ ಕುರಿತು ಸಮಗ್ರ ವರದಿ ನೀಡಲಾಗುತ್ತದೆ.

ಅಷ್ಟೇ ಅಲ್ಲದೆ, ಸರ್ಕಾರಕ್ಕೆ ವರದಿ ನೀಡಿದ ಬಳಿಕ ಅದರ ಪ್ರಗತಿ ಕುರಿತು ಸಂಘ ನಿರಂತವಾಗಿ ಪ್ರಯತ್ನಿಸಲಿದೆ ಎಂದು ಮಾಹಿತಿ ನೀಡಿದರು.
ಪತ್ರಕರ್ತರ ಸಂಘಟನೆ ಇತಿಹಾಸದಲ್ಲಿ ಮೊದಲ ಬಾರಿ ಈ ರೀತಿಯ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದರ ಜೊತೆ ಜಿಲ್ಲೆಯಲ್ಲಿ ಮಾದಕ ವಸ್ತುಗಳ ನಿಯಂತ್ರಣ ಉದ್ದೇಶದಿಂದ ವರ್ಷ ಪೂರ್ತಿ ಮಾದಕ ವಸ್ತು ವಿರೋಧಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜೊತೆಗೆ ಸಾಂಸ್ಕೃತಿ, ಕ್ರೀಡಾ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಕುಗ್ರಾಮಗಳನ್ನು ತಿಳಿಸಲು ಸಾವರ್ಜನಿಕರು ಸಂಘದ ಅಧ್ಯಕ್ಷ ಗೋಪಾಲ್ ಎಸ್.ಯಡಗೆರೆ (9108825454), ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ(9341126340) ಅವರನ್ನು ಸಂಪರ್ಕಿಸಬಹುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಕೆ.ತಿಮ್ಮಪ್ಪ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ, ಖಜಾಂಚಿ ಶಿವಮೊಗ್ಗ ನಂದನ್ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...