Wednesday, October 2, 2024
Wednesday, October 2, 2024

ಕೇರಳದಲ್ಲಿ ಆತಂಕ ಹುಟ್ಟಿಸಿದ ಮಳೆರಾಯ

Date:

ತಮಿಳುನಾಡಿನಲ್ಲಿ ಮಳೆರಾಯನ ಆರ್ಭಟ ತಗ್ಗಿದೆ. ಆದರೆ , ಕೇರಳದಲ್ಲಿ ಮಳೆರಾಯನ ಕಾಟ ಶುರುವಾಗಿದೆ. ಕೇರಳದ ಜನ ಭಾರಿ ಮಳೆಯಿಂದ ಕಂಗೆಟ್ಟಿದ್ದಾರೆ.

ಒಂದೇ ಸಮನೆ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದ ಕೇರಳದ ಆರು ಜಿಲ್ಲೆಗಳಿಗೆ ಕೇರಳದ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆ ಅನಾಹುತದಿಂದ ಕೆಲವೆಡೆ ಸಣ್ಣ ಪ್ರಮಾಣದ ಭೂಕುಸಿತ ಉಂಟಾಗಿದೆ.
ನ.16 ರವರೆಗೆ ಗುಡುಗು ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಸೂಚಿಸಿದೆ. ಮಳೆಯಿಂದಾಗಿ ತಿರುವನಂತಪುರ ನಾಗರಕೊಯಿಲ್ ಪಟ್ಟಣಗಳಲ್ಲಿ ನೀರು ನಿಂತಿದೆ. ನೆಯ್ಯಟ್ಟಿಂಕರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸೇತುವೆ ನೀರಿನಲ್ಲಿ ಕೊಚ್ಚಿ ಹೋಗಿದೆ.
ತಿರುವಂತಪುರ, ಕೊಲ್ಲಂ, ಇಡುಕ್ಕಿ ಜಿಲ್ಲೆ, ಮುಂತಾದ ಪ್ರದೇಶಗಳಲ್ಲಿ ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ತ್ರಿಶೂರ್, ಕಣ್ಣೂರು, ಎರ್ನಾಕುಲಂ, ಕಾಸರಗೋಡು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅರುವಿಕ್ಕರ(ಕರಮಣ ನದಿ) ಮತ್ತು ಪೆಪ್ಪಾರ ಆಣೆಕಟ್ಟಿನಿಂದ ನೀರು ಬಿಡಲಾಗಿದೆ ಎಂದು ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...

CM Siddharamaih ಸಿದ್ಧರಾಮಯ್ಯ ರಾಜಿನಾಮೆ ಬೇಡ.ಬೆಂಬಲಿಸಿ ಜನಜಾಥಾ-‘ಅಹಿಂದ’ ಮಹೇಶ್

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದು ಬೇಡ....