Sunday, August 23, 2026
Sunday, August 23, 2026

ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ. ಎಚ್.ಡಿ.ಕೆ. ಜನ್ಮದಿನಾಚರಣೆ

Date:

ಚಿಕ್ಕಮಗಳೂರು, ಮಾಜಿ ಮುಖ್ಯಮಂತ್ರಿ, ರೈತರ ಕಣ್ಮಣಿ ಹೆಚ್.ಡಿ.ಕುಮಾರಸ್ವಾಮಿ ಅವರ 64ನೇ ಜನ್ಮದಿನಾಚರಣೆಯನ್ನು ನಗರದ ಸರ್ಕಾರಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ರಕ್ತದಾನ ಮಾಡುವ ಮೂಲಕ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

ಈ ವೇಳೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಹೊಲದ ಗದ್ದೆ ಗಿರೀಶ್ ರಾಜ್ಯದಲ್ಲಿ 2 ಬಾರಿ ಮುಖ್ಯಮಂತ್ರಿಯಾಗಿ ಆಡಳಿತ ನಿರ್ವಹಿಸಿದ ಅವರು ರೈತರು, ಬಡವರು, ದೀನ ದಲಿತರು ಹಾಗೂ ಅಲ್ಪಸಂಖ್ಯಾತರಿಗೆ ಉತ್ತಮ ಯೋಜನೆಗಳನ್ನು ರೂಪಿಸಿ ಅನುಕೂಲ ಕಲ್ಪಿಸಿಕೊಟ್ಟಿದ್ದರು ಎಂದರು.

ದೇಶದ ಹಿರಿಯ ರಾಜಕೀಯ ಮುತ್ಸದ್ದಿಗಳು ನಿಬ್ಬೆರಗಾಗುವ ರೀತಿಯಲ್ಲಿ ಆಡಳಿತ ನೀಡಿ ಎಲ್ಲ ವರ್ಗದ ಜನಮನ ಗೆದ್ದ ಜನನಾಯಕರಾಗಿದ್ದಾರೆ. ಇದೀಗ ಪಂಚರತ್ನ ಯೋಜನೆಯ ಮೂಲಕ ನಾಡಿನ ಜನತೆಯ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿದ್ದಾರೆ ಎಂದು ಹೇಳಿದರು.

ತಾಲ್ಲೂಕು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಬಿ.ಎಂ.ತಿಮ್ಮಶೆಟ್ಟಿ ಮಾತನಾಡಿ ಹೆಚ್.ಡಿ.ಕೆ. ಅವರು ಜನತೆಯ ಸಮಸ್ಯೆಯನ್ನು ಅರಿಯುವ ಸಲುವಾಗಿ ಬಡವರ ಮನೆಯಲ್ಲಿ ಗ್ರಾಮವಾಸ್ತವ್ಯ ಮಾಡುವ ಮೂಲಕ ಕಷ್ಟಗಳಿಗೆ ಸ್ಪಂದಿಸುವ ಕಾಯಕದಲ್ಲಿ ನಿರಂತರಾಗಿ ತೊಡಗಿದ್ದ ಮಹಾನಾಯಕ ಎಂದು ತಿಳಿಸಿದರು.

ಕುಮಾರಸ್ವಾಮಿ ಅವರು ಅಧಿಕಾರದ ಸಮಯದಲ್ಲಿ ಜನಪರ ಯೋಜನೆಗಳಾದ ಮಕ್ಕಳಿಗೆ ಸೈಕಲ್, ಉಚಿತ ಅಕ್ಕಿ, ವೃದ್ದಾಪ್ಯದಲ್ಲಿರುವವರಿಗೆ ವಿವಿಧ ಸವಲತ್ತುಗಳನ್ನು ನೀಡಿ ಜನಮನ್ನಣೆ ಗಳಿಸಿದ ಹಿರಿಯ ರಾಜಕೀಯ ಮುತ್ಸದಿ ಎಂದು ವರ್ಣಿಸಿದರು.

ಇದೇ ವೇಳೆ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಹೆಚ್‌ಎಸ್ ಮಂಜಪ್ಪ, ಮಹಾ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಚಂದ್ರಪ್ಪ, ಮುಖಂಡರುಗಳಾದ ಡಿ.ಕೆ.ಚಂದ್ರೇಗೌಡ, ಸಿ.ಕೆ.ಮೂರ್ತಿ, ಹುಣಸೇಮಕ್ಕಿ ಲಕ್ಷಣ , ಆನಂದೇಗೌಡ, ಚಂದ್ರಶೇಖರ್, ಶ್ರೀಮತಿ ಜಯಂತಿ, ಚಂದ್ರಶೇಖರ್ ಶಶಿಕುಮಾರ್, ರಕ್ತನಿಧಿ ಕೇಂದ್ರದ ಡಾ|| ಮುರುಳಿಧರ್, ಸಿಬ್ಬಂದಿಗಳಾದ ದಿವಾಕರ್, ಮಧುರೈ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...