Thursday, February 5, 2026
Thursday, February 5, 2026

ಪಾಕ್ ಗೆ ಆಫ್ಘನ್ ಮನವಿ

Date:

ಯುದ್ಧ ಬಾಧಿತ ಅಫ್ಘಾನಿಸ್ತಾನದಲ್ಲಿ ಆಹಾರ ಬಿಕ್ಕಟ್ಟು ಪರಿಸ್ಥಿತಿ ಉಂಟಾಗಿದೆ. ಮಾನವೀಯ ಮೌಲ್ಯಗಳ ನಿಟ್ಟಿನಲ್ಲಿ ಆಫ್ಘಾನಿಸ್ತಾನಕ್ಕೆ ಆಹಾರದ ನೆರವು ನೀಡುವ ಕುರಿತಂತೆ ಭಾರತದೊಂದಿಗೆ ವಿಶ್ವಸಂಸ್ಥೆಯ ಡಬ್ಲ್ಯು ಎಫ್ ಪಿ ಚರ್ಚೆ ನಡೆಸಿದೆ ಈ ಬಗ್ಗೆ ಡಬ್ಲ್ಯೂ ಎಫ್ ಪಿ ಮುಖ್ಯಸ್ಥೆ ಸೆಸಿಲಿಯ ಗಾರ್ಜೊನ್ ಹೇಳಿದ್ದಾರೆ.

ಹಲವು ಕಾರಣದಿಂದಾಗಿ ಅಫ್ಘಾನಿಸ್ತಾನದಲ್ಲಿ ಜನರು ತೀವ್ರವಾದ ಆಹಾರ ಬಿಕ್ಕಟ್ಟು ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಭಾರತವು ಸೇರಿದಂತೆ ಈಗಾಗಲೇ ಜಗತ್ತಿನ ಎಲ್ಲಾ ರಾಷ್ಟ್ರಗಳು ಯುದ್ಧಪೀಡಿತ ಆಫ್ಘಾನಿಸ್ತಾನದ ಕುಟುಂಬಗಳಿಗೆ ಆಹಾರದ ನೆರವು ಕಲ್ಪಿಸುವ ಬಗ್ಗೆ ಡಬ್ಲ್ಯು ಎಫ್ ಪಿ ನಡುವೆ ಚರ್ಚೆ ನಡೆಯುತ್ತಿದೆ. ಶೀಘ್ರವೆ ಇವೆಲ್ಲಾ ಇತ್ಯರ್ಥಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಆಹಾರ ಬಿಕ್ಕಟ್ಟನ್ನು ಎದುರಿಸುತ್ತಿರುವ ಅಫ್ಘಾನಿಸ್ತಾನ ಭಾರತದಿಂದ ಮಾರ್ಗವಾಗಿ ಗೋಧಿ ಸಾಗಾಣಿಕೆಗೆ ಅನುಮತಿ ನೀಡುವಂತೆ ಪಾಕಿಸ್ತಾನಕ್ಕೆ ಮನವಿ ಸಲ್ಲಿಸಿದೆ. ಆಫ್ಘಾನಿಸ್ತಾನ್ ಮನವಿಯನ್ನು ಪರಿಗಣಿಸುವುದಾಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ತಿಳಿಸಿದ್ದಾರೆ.

ಭಾರತ ಮಾನವೀಯ ಆಧಾರದ ಮೇಲೆ ಅಫ್ಘಾನಿಸ್ತಾನಕ್ಕೆ ಗೋಧಿಯನ್ನು ಸರಬರಾಜು ಮಾಡಲು ಸಿದ್ಧತೆ ಮಾಡಿಕೊಂಡಿದೆ. ರಸ್ತೆ ಮಾರ್ಗದ ಮೂಲಕವೇ ಆಹಾರ ಸರಬರಾಜು ಆಗಬೇಕಾಗಿದ್ದು, ಇದಕ್ಕೆ ಪಾಕಿಸ್ತಾನ ಸಮ್ಮತಿ ನೀಡಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...