Saturday, September 28, 2024
Saturday, September 28, 2024

ಮಕ್ಕಳ ಬೆಳಣಿಗೆಯತ್ತ ಗಂಭೀರವಾಗಿ ಗಮನ ಹರಿಸಿ-ಡಿ.ಎಸ್.ಅರುಣ್

Date:

ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಡುವ ಕೆಲಸ ಮನೆಯಲ್ಲಾಗಬೇಕು. ಇದರ ಜವಾಬ್ದಾರಿಯನ್ನು ಪಾಲಕರೇ ಹೊರಬೇಕು. ಮಕ್ಕಳತ್ತ ನಿರ್ಲಕ್ಷ್ಯ ವಹಿಸದೆ ಗಮನಹರಿಸಿ ಉತ್ತಮ ವ್ಯಕ್ತಿಗಳನ್ನಾಗಿ ಬೆಳೆಸುವ ಜವಾಬ್ದಾರಿ ಇದೆ ಎಂದು ವಿಧಾನಪರಿಷತ್ ಸದಸ್ಯ ಡಿ. ಎಸ್. ಅರುಣ್ ಹೇಳಿದರು.

ಶಿವಮೊಗ್ಗ ಜಿಲ್ಲಾ ಕಾರ್‍ಯನಿರತ ಪತ್ರಕರ್ತರ ಸಂಘ ಮತ್ತು ಪ್ರೆಸ್ ಟ್ರಸ್ಟ್ ಆಶ್ರಯದಲ್ಲಿ ಪತ್ರಿಕಾ ಭವನದಲ್ಲಿ ಏರ್ಪಡಿಸಲಾಗಿದ್ದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ, ಬಹುಮಾನ ವಿತರಣೆ ಕಾರ್‍ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ಸದಾ ಕ್ರಿಯಾಶೀಲರಾಗಿರಬೇಕು. ಅವರನ್ನು ಹೇಗೆ ಬೆಳೆಸಬೇಕೆನ್ನುವ ಅವಲೋಕನ ನಡೆಯಬೇಕಿದೆ. ಇತ್ತೀಚಿನ ವರ್ಷಗಳಲ್ಲಿ ಕೊರೊನಾದಿಂದ ಮಕ್ಕಳ ಕೈಗೆ ಬಂದ ಮೊಬೈಲ್ ಅವರನ್ನು ಇನ್ನಷ್ಟು ಅದಕ್ಕೆ ಆಪ್ತರನ್ನಾಗಿ ಮಾಡಿದೆ. ಇದರಿಂದ ಅವರನ್ನು ಹೊರತರಬೇಕು. ಮೊಬೈಲ್ ಚಟದಿಂದ ಹೊರಬಂದರೆ ಮಾತ್ರ ಅವರ ಕ್ರಿಯಾಶೀಲತೆ ಹೆಚ್ಚಿ ವಿವಿಧ ರಂಗಗಳಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಮಕ್ಕಳು ಮೊಬೈಲ್ ಬಿಡಲು ಸಿದ್ಧರಿಲ್ಲ. ಆದರೆ ಬಿಡುವಂತೆ ಪಾಲಕರು ಮಾಡುವುದು ಈಗ ಅನಿವಾರ್‍ಯವಾಗಿದೆ ಎಂದು ಹೇಳಿದರು.

ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಕ್ಷರಿ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿ, ಪತ್ರಕರ್ತರು ಸಮಾಜಮುಖಿಯಾಗಿ ಕೆಲಸ ಮಾಡಬಹುದು ಎನ್ನುವುದನ್ನು ಶಿವಮೊಗ್ಗ ಪತ್ರಕರ್ತರು ತೋರಿಸಿಕೊಟ್ಟಿದ್ದಾರೆ. ಕೇವಲ ಸುದ್ದಿ ಬರೆಯುವುದಕ್ಕಷ್ಟೇ ಸೀಮಿತರಾಗದೆ ಸಮಾಜದ ಇತರೆ ಕೆಲಸಕ್ಕೂ ಮುಂದಾಗಬೇಕು. ಸ್ವಾಭಿಮಾನದಿಂದ ಮಕ್ಕಳು ತಮ್ಮ ಬದುಕನ್ನು ಕಟ್ಟಿಕೊಳ್ಳಲು ನೆರವಾಗಬೇಕಿದೆ. ಬಾಹ್ಯ ಆಕರ್ಷಣೆಗಳಿಗೆ ಸಿಲುಕದೆ ಬದ್ಧತೆ ಮತ್ತು ಏಕಮನಸ್ಸಿನಿಂದ ವಿದ್ಯಾಭ್ಯಾಸ ಮುಂದುವರಿಸಬೇಕು. ಯುವಶಕ್ತಿ ಸರಿದಾರಿಯಲ್ಲಿ ಸಾಗುವಂತಾಗಬೇಕೆಂದರು.

ವಿಸ್ತಾರ ನ್ಯೂಸ್‌ನ ಸಿಇಒ ಹಾಗೂ ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಮಾತನಾಡಿ, ಮಕ್ಕಳನ್ನು ಪ್ರೋತ್ಸಾಹಿಸುವ ಕೆಲಸವನ್ನು ಪತ್ರಕರ್ತರು ಮಾಡುತ್ತಿರುವುದು ಶ್ಲಾಘನೀಯ. ಇದೊಂದು ವಿಭಿನ್ನ ಕೆಲಸ. ತಮ್ಮ ದಿನನಿತ್ಯದ ಕೆಲಸಗಳಿಂದ ಹೊರಬಂದು ಇಂತಹ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪತ್ರಕರ್ತರು ಮಾದರಿಯಾಗಿದ್ದಾರೆ ಎಂದರು.

ಕ್ರಾಂತಿದೀಪ ಪ್ರಾದೇಶಿಕ ಪತ್ರಿಕೆಯ ಸಂಪಾದಕ ಎನ್. ಮಂಜುನಾಥ ಅವರು ರಾಜ್ಯ ನಿವೃತ್ತ ಪತ್ರಕರ್ತರ ಮಾಸಾಶನ ಸಮಿತಿ ಸದಸ್ಯರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರನ್ನು ಈ ಸಂದರ್ಭದಲ್ಲಿ ಸಂಘದಿಂದ ಗೌರವಿಸಲಾಯಿತು.

ಸನ್ಮಾನಕ್ಕುತ್ತರವಾಗಿ ಮಾತನಾಡಿದ ಅವರು, ಜಿಲ್ಲಾ ಕಾರ್‍ಯನಿರತ ಪತ್ರಕರ್ತರ ಸಂಘ ವೈಶಿಷ್ಟ್ಯಪೂರ್ಣ ಕೆಲಸಗಳನ್ನು ಮಾಡುತ್ತಿದೆ. ಸಮಾಜದಲ್ಲಿ ಬೇರುಬಿಡುತ್ತಿರುವ ಮಾದಕ ವ್ಯಸನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದೆ. ಮಕ್ಕಳಲ್ಲಿರುವ ಪ್ರತಿಭೆ ಹೊರತರುವ ಕೆಲಸ ಮಾಡಿದೆ. ವಿಶಿಷ್ಟ ಕಾರ್‍ಯಕ್ರಮದ ಮೂಲಕ ಸಂಘ ಮಹತ್ವದ ಹೆಜ್ಜೆ ಇಡುತ್ತಿದೆ ಎಂದರು.

ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ ಪ್ರಾಸ್ತಾವಿಕ ಮಾತನಾಡಿ, ಪತ್ರಕರ್ತರ ಸಂಘಟನೆ ಹಮ್ಮಿಕೊಂಡಿರುವ ಜನಮುಖಿ ಕಾರ್ಯಕ್ರಮಗಳ ಬಗ್ಗೆ ವಿವರ ನೀಡಿದರು.

ಸಂಘದ ಕಾರ್‍ಯದರ್ಶಿ ಸಂತೋಷ್ ಕಾಚಿನಕಟ್ಟೆ ಸ್ವಾಗತಿಸಿದರು. ಸಂಘದ ಗೌರವ ಅಧ್ಯಕ್ಷ ಎಸ್.ಚಂದ್ರಕಾಂತ್, ಪ್ರೆಸ್ ಟ್ರಸ್ಟ್ ಕಾರ್ಯದರ್ಶಿ ನಾಗರಾಜ್ ನೇರಿಗೆ ಉಪಸ್ಥಿತರಿದ್ದರು. ಲಿಯಾಕತ್ ವಂದಿಸಿದರೆ, ಹೊನ್ನಾಳಿ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...