Wednesday, December 17, 2025
Wednesday, December 17, 2025

ಅಪರಾಧ ತಡಗಟ್ಟಲು ಯುವಜನತೆ ಜಾಗೃತರಾಗಬೇಕು – ಸಿ.ಎನ್.ರಮೇಶ್

Date:

ಅಪರಾಧಗಳನ್ನು ತಡೆಗಟ್ಟಬೇಕಾದರೆ ಮೊದಲು ನಾವು ಜಾಗೃತರಾಗಬೇಕು. ಯುವಜನರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಕುದುರೆಮುಖ ವೃತ್ತ ನಿರೀಕ್ಷಕ ಸಿ.ಎನ್.ರಮೇಶ್ ಅವರು ಹೇಳಿದರು.

ಕಳಸದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ರಾಷ್ಟೀಯ ಸೇವಾ ಯೋಜನೆ ಮತ್ತು ಕಾನೂನು ಅರಿವು ಜಾಗೃತಿ ಘಟಕ ಏರ್ಪಡಿಸಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಹಿಳೆಯರು ಹೊರಗಡೆ ತೆರಳುವ ಸಂದರ್ಭದಲ್ಲಿ ಚಿನ್ನಾಭರಣ ಬಗ್ಗೆ ಮುಂಜಾಗ್ರತೆ ವಹಿಸುವುದು ಸೂಕ್ತವಾಗಿದೆ. ಜೊತೆಗೆ ರಸ್ತೆ ಸುರಕ್ಷಾ ನಿಯಮಗಳನ್ನು ಪಾಲಿಸಿಕೊಳ್ಳಬೇಕು. ಯುವಕರು ಹೆಲ್ಮೆಟ್ ಧರಿಸುವ ಮೂಲಕ ತಮ್ಮ ಅಮೂಲ್ಯ ಜೀವವನ್ನು ರಕ್ಷಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಸಂಪನ್ಮೂಲ ವ್ಯಕ್ತಿ ಕಳಸ ಠಾಣೆಯ ಸಹಾಯಕ ಸಬ್‌ಇನ್ಸ್ಪೆಕ್ಟರ್ ಡಾ.ಸಿ.ಆರ್.ಮೋಹನ್ ಕುಮಾರ್ ಮಾತನಾಡಿ ವಿದ್ಯಾರ್ಥಿಗಳು ಸದಾ ಹೆತ್ತವರ ಸಲಹೆಗಳನ್ನು ಪಾಲಿಸುವುದರೊಂದಿಗೆ ದೇಶದ ಕಾನೂನನ್ನು ಗೌರವಿಸಬೇಕು. ಮಾದಕ ದ್ರವ್ಯಗಳ ಕುರಿತು ಎಚ್ಚರಿಕೆ ವಹಿಸಬೇಕು. ಪರವಾನಗಿ ಮತ್ತಿತರ ಸೂಕ್ತ ದಾಖಲೆಗಳಿಲ್ಲದೆ ವಾಹನಗಳನ್ನು ಚಲಾಯಿಸಬಾರದು. ಬ್ಯಾಂಕ್ ಸಂಬಂಧಪಟ್ಟ ಯಾವುದೇ ಒಟಿಪಿ ಅಥವಾ ಪಾಸ್‌ವರ್ಡ್ಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲ ವಿನಯ್ ಕುಮಾರ್ ಶೆಟ್ಟಿ ವಿದ್ಯಾರ್ಜನೆಯೊಂದಿಗೆ ಸಾಮಾನ್ಯ ಜ್ಞಾನವನ್ನು ಬೆಳೆಸಿಕೊಳ್ಳಬೇಕು. ಪೊಲೀಸ್ ಇಲಾಖೆ ಹಮ್ಮಿ ಕೊಂಡಿರುವ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕೈ ಜೋಡಿಸಿ ಸಮಾಜ ದಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.
ಈ ಸಂದರ್ಭದಲ್ಲಿ ರಾಷ್ಟಿçÃಯ ಸೇವಾ ಯೋಜನಾ ಮುಖ್ಯಸ್ಥ ವಿಶು ಕುಮಾರ್, ಕಾಲೇಜ್ ನಾ ಎಲ್ಲಾ ಬೋಧಕರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...