Wednesday, December 17, 2025
Wednesday, December 17, 2025

ಮಡಿವಾಳ ಸಮಾಜ ಸಂಘದ ಪದಾಧಿಕಾರಿಗಳ ಆಯ್ಕೆ ಬೈಲಾ ವಿರುದ್ಧ – ನಾಗರಾಜ್

Date:

ಡಿ.11 ರಂದು ನಡೆದ ಜಿಲ್ಲಾ ಮಡಿವಾಳ ಸಮಾಜ ಸಂಘದ ಪದಾಧಿಕಾರಿಗಳ ಆಯ್ಕೆ ಆಗಿರುವುದು ಬೈಲಾಕ್ಕೆ ವಿರುದ್ಧವಾಗಿದೆ ಎಂದು ಮಡಿವಾಳ ಸಂಘದ ನಿರ್ದೇಶಕ ನಾಗರಾಜ್ ಎಂ ಆಗ್ರಹಿಸಿದ್ದಾರೆ.

ಈ ಕುರಿತು ಶಿವಮೊಗ್ಗದ ಮಿಡಿಯಾ ಹೌಸ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಅವರು, ಸಿ.ಹನುಮಂತಪ್ಪ, ಪಿ.ಮಧು, ಕೊಟ್ಟಪ್ಪ ಎಂಬುವರು ಅನುಕ್ರಮವಾಗಿ ಉಪಾಧ್ಯಕ್ಷರಾಗಿದ್ದಾರೆ. ಸಹಕಾರ್ಯದರ್ಶಿ ಮತ್ತು ಸಂಚಾಲಕರಾಗಿದ್ದಾರೆ. ಇವರ ಹೆಸರು ಚುನಾವಣೆಯಲ್ಲಿ ಚುನಾಯಿತರಾದ ಪಟ್ಟಿಯಲ್ಲಿ ಇಲ್ಲ.ಮತ್ತು ಮಾನ್ಯತೆ ಪಡೆದ ಸಂಘಗಳ ಪಟ್ಟಿಯಲ್ಲಿ ಇಲ್ಲದವರನ್ನ ದಿಡೀರ್ ಅಂತ ಪದಾಧಿಕಾರಿಯನ್ನಾಗಿ ಮಾಡಲಾಗಿದೆ ಎಂದರು.

ಸಂಘದ ಅಂಗರಚನೆಯ ನಿಯಮ ನಿಬಂಧನೆಯ ಭಾಗ-3 ರಲ್ಲಿ 16 ರ ಪ್ರಕಾರ ತಾಲೂಕು ಸಂಘಗಳು ಜಿಲ್ಲಾ ಸಂಘದ ಮಾನ್ಯತೆ ಪಡೆದಿಲ್ಲ. ಆದ್ದರಿಂದ ಮಾನ್ಯತೆ ಹೊಂದದೆ ಇರುವ ಸಂಘಗಳ ಪ್ರತಿನಿಧಿಗಳು ಪದಾಧಿಕಾರಿಯಾಗಲು ಸಂಘದ ಕಾನೂನಿನಲ್ಲಿ ಅವಕಾಶ ಖಂಡಿತವಿಲ್ಲವೆಂದು ತಿಳಿಸಿದರು.

ಸಂಘದ ಕಾರ್ಯಕಾರಿ ಸಮಿತಿಯ ಆಯ್ಕೆಗೆ ನಡೆದ ಚುನಾವಣೆಗೆ ನಿಗದಿಯಾಗುವ ದಿನಾಂಕದ ಪೂರ್ವದ 15ದಿನಗಳ ಮುಂಚೆ ನಿಗಧಿತ ಶುಲ್ಕ ಪಾವತಿ ಮಾಡಿ ನವೀಕರಿಸಿದ ಮಾನ್ಯತೆ ಪಡೆದ ಸಂಘಗಳ ಪಟ್ಟಿಯನ್ನ ಪ್ರಕಟಿಸಿಲ್ಲ.ಮಾನ್ಯತೆ ಪಡೆದ ಸಂಘಗಳ ಪ್ರತಿನಿಧಿಗಳು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ ಎಂದು ಸಂಘದ ಚುನಾವಣಾಧಿಕಾರಿ ಅಧಿಕೃತವಾಗಿ ಘೋಷಣೆ ಮಾಡಿ ಪ್ರಕಟಿಸಿಲ್ಲ. ಆದ್ದರಿಂದ ಇವರ ನೇಮಕ ರದ್ದುಪಡಿಸಬೇಕು. ಈಗಾಗಲೇ ಸಹಕಾರ ಉಪನಿಬಂಧಕರ ಗಮನಕ್ಕೆ ತರಲಾಗಿದೆ. ಒಂದು ವೇಳೆ ಸರಿಹೋಗದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಡಿವಾಳ ಸಮಾಜದ ಮುಖಂಡರಾದ ಹಿರಣ್ಣಯ್ಯ ,ಟಿ.ಎಸ್. ಗುರುಮೂರ್ತಿ , ಪ್ರಮೋದ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...