Thursday, February 5, 2026
Thursday, February 5, 2026

ಗಾಡಿಕೊಪ್ಪ ಕೆರೆ ಅಭಿವೃದ್ಧಿ ಮಾಡಲು ಭೂಮಿ ಸಂಸ್ಥೆ ಸಿದ್ಧ

Date:

ಶಿವಮೊಗ್ಗ ತಾಲೂಕು ಕಸಬಾ ಹೋಬಳಿ ಗಾಡಿಕೊಪ್ಪ ಗ್ರಾಮದ ಸರ್ವೆ ನಂಬರ್ 15ರಲ್ಲಿ ಬರುವ ಕೆರೆಯನ್ನು ಸರ್ವೇ ಮಾಡಿ ಕೆರೆ ಅಭಿವೃದ್ಧಿ ಪಡಿಸಲು ಭೂಮಿ ಸಂಸ್ಥೆಗೆ ವಹಿಸಿಕೊಡುವಂತೆ, ಈ ಕೆರೆಯ ಅಭಿವೃದ್ಧಿ ಪಡಿಸಲು ಭೂಮಿ ಸಂಸ್ಥೆಗೆ ಅನುಮತಿ ನೀಡಿದಲ್ಲಿ, ಭೂಮಿ ಸಂಸ್ಥೆಯ ಜೊತೆಗೆ ಹಲವಾರು ಸಂಘ ಸಂಸ್ಥೆಗಳು ಕೈಜೋಡಿಸಿವೆ, ಸದರಿ ಕೆರೆ ಅಭಿವೃದ್ಧಿ ಪಡಿಸಿದಲ್ಲಿ ಈ ಭಾಗದ ಸಾರ್ವಜನಿಕರಿಗೆ, ಜಾನುವಾರುಗಳಿಗೆ ಬೇಸಿಗೆ ಸಂದರ್ಭದಲ್ಲೂ ನೀರು ಒದಗಿಸಬಹುದಾಗಿದೆ. ಸಂಘ-ಸಂಸ್ಥೆಗಳು, ಸಾರ್ವಜನಿಕರ ಸಹಕಾರದಿಂದ ಈ ಕೆರೆಯ ಹೂಳು ತೆಗೆಸುವುದರಿಂದ ಅಂತರ್ಜಲ ವೃದ್ಧಿಯಾಗಲಿದೆ. ಹಾಗೆಯೇ ಕೆರೆ ಏರಿಯನ್ನು ಅಭಿವೃದ್ಧಿ ಪಡಿಸಿದಲ್ಲಿ ಸಾರ್ವಜನಿಕರು ವಾಯು ವಿಹಾರ ನಡೆಸಲು ಅನುಕೂಲವಾಗಲಿದೆ. ಕೆರೆ ಏರಿ ಸುತ್ತ ಗಿಡಗಳನ್ನು ನೆಟ್ಟು ಪೋಷಿಸುವುದರಿಂದ ಮಣ್ಣು ಸವಕಳಿ ತಪ್ಪಿಸಬಹುದು. ಸೂಕ್ತ ನಿರ್ವಹಣೆ ಇಲ್ಲದೇ ಹಾಳಾಗುತ್ತಿರುವ ಕೆರೆಯನ್ನು
ಸಂರಕ್ಷಿಸಲು ಭೂಮಿ ಸಂಸ್ಥೆ ಮುಂದಾಗಿದ್ದು, ಜಿಲ್ಲಾಡಳಿತ ಭೂಮಿ ಸಂಸ್ಥೆಗೆ ಕೆರೆ ನಿರ್ವಹಣೆಯ ಜವಾಬ್ದಾರಿ ವಹಿಸಿಕೊಡಬೇಕಾಗಿ ಮನವಿ ಮಾಡಿದ್ದಾರೆ .

ಈ ಸಂದರ್ಭದಲ್ಲಿ ಭೂಮಿ ಸಂಸ್ಥೆ ಯ ಪ್ರಧಾನ ಕಾರ್ಯದರ್ಶಿ ನವೀನ್ ತಲಾರಿ, ಕಾಮಧೇನು ಗೋ ಶಾಲೆಯ ಅರ್ ತೇಜೇಶ್, ಜೈ ಸಂಸ್ಥೆ ಅಧ್ಯಕ್ಷ ಯತೀಶ್, ಪುಟ್ಟಪ್ಪ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಶಿವಕುಮಾರ್ ಕೆ ಪಿ, ಭೂಮಿ ಸಂಸ್ಥೆಯ ಸದಸ್ಯರು, ಪರಿಸರ ಪ್ರೇಮಿಗಳು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...