Tuesday, October 1, 2024
Tuesday, October 1, 2024

ಪತ್ರಕರ್ತರ ಕ್ರಿಕೆಟ್ ಟೂರ್ನಿಯಲ್ಲಿ ಮಿಂಚಿದ ಕೆ ಲೈವ್ ನ್ಯೂಸ್ ನ ರಂಜನ್

Date:

ಚಿತ್ರದುರ್ಗದಲ್ಲಿ ನಡೆಯುತ್ತಿರುವ 6 ಜಿಲ್ಲೆಗಳ ಪತ್ರಕರ್ತ ತಂಡಗಳ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ತಂಡವು ಸೆಮಿಫೈನಲ್ ಪ್ರವೇಶಿಸಿದೆ.

ಎರಡನೇ ದಿನದ ಇಂದಿನ ಆರಂಭಿಕ ಪಂದ್ಯಾವಳಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಎ ತಂಡದ ವಿರುದ್ಧ ರೋಚಕ ಆಟವಾಡಿದ ಶಿವಮೊಗ್ಗ ತಂಡವು 22 ರನ್ ಗಳಿಂದ ಗೆಲುವು ಸಾಧಿಸಿ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿತು.

ಟಾಸ್ ಗೆದ್ದ ಚಿತ್ರದುರ್ಗ ಎ ತಂಡದ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಶಿವಮೊಗ್ಗ ಪತ್ರಕರ್ತರ ತಂಡ ನಿಗದಿತ ಐದು ಓವರ್ ಗಳಲ್ಲಿ 65 ರನ್ ಗಳನ್ನು ಗಳಿಸಿತು.

ತಂಡದ ನವೀನ್ , ಅಮೋಘ 35 ರನ್ ಗಳನ್ನು, ಲೋಹಿತ್ 28 ಗಳೊಂದಿಗೆ ಎದುರಾಳಿ ತಂಡದ ಬೌಲರ್ ಗಳನ್ನು ದಂಡಿಸಿದರು.

65 ರನ್ ಗಳ ಬೆನ್ನತ್ತಿದ ಚಿತ್ರದುರ್ಗ ಪತ್ರಕರ್ತರ ತಂಡವು ಶಿವಮೊಗ್ಗ ಪತ್ರಕರ್ತರ ತಂಡದ ಆಕಾಶ್ ಅವರ ಮಾರಕ ಬೌಲಿಂಗ್ ಮುಂದೆ ನೆಲಕಚ್ಚಿತು. ಆಕಾಶ್ ಒಂದೆ ಓವರ್ ನಲ್ಲೆ 3 ವಿಕೆಟ್ ಗಳನ್ನು ಬಲಿ ತೆಗೆದುಕೊಳ್ಳುವ ಮುಖಾಂತರ ಚಿತ್ರದುರ್ಗ ತಂಡವನ್ನು ಸೋಲಿನ ದವಡೆಗೆ ನೂಕಿದರು.

ಕೆ ಲೈವ್ ನ್ಯೂಸ್ ನ ರಂಜನ್ ಅವರು ಒಂದೇ ಕೈ ಯಲ್ಲಿ ಚೆಂಡನ್ನು ಕ್ಯಾಚ್ ಹಿಡಿದಿದ್ದಾರೆ.

ಅಂತಿಮವಾಗಿ ಚಿತ್ರದುರ್ಗ ಪತ್ರಕರ್ತರ ತಂಡವು 5 ಓವರ್ ಗಳಲ್ಲಿ 43 ಗಳಿಗೆ ಸೀಮಿತವಾಗಿ‌ ಶಿವಮೊಗ್ಗ ಪತ್ರಕರ್ತರ ತಂಡದ ಮುಂದೆ ಶರಣಾಯಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಿತ್ರದುರ್ಗ ಶಾಖೆಯು ಕ್ರಿಕೆಟ್ ಪಂದ್ಯಾವಳಿಯ ಆತಿಥ್ಯವಹಿಸಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...